ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಆಗಸ್ಟ್ 23 ಬುಧವಾರ ಮುಂಜಾನೆ 11 ಗಂಟೆಗೆ ವಿಧಾನಸೌಧದಲ್ಲಿ ಸರ್ವಪಕ್ಷ ಸಭೆ ಕರೆಯಲಾಗಿದೆ. ಹೀಗಾಗಿ ಸಿಎಂ ಸಿದ್ದರಾಮಯ್ಯ ರಾಜಕೀಯ ನಾಯಕರಿಗೆ ಆಹ್ವಾನ ನೀಡಿದ್ದಾರೆ.
ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸುತ್ತಿರುವ ಜೆಡಿಎಸ್ ಮಾಜಿ ಸಿಎಂ ಕುಮಾರಸ್ವಾಮಿ ಸೇರಿದಂತೆ ಬಿಜೆಪಿಯ ನಾಯಕರು ಪಾಲ್ಗೊಳ್ಳುತ್ತಿದ್ದು, ಯಾವೆಲ್ಲ ವಿಚಾರಗಳು ಚರ್ಚೆಯಾಗುತ್ತವೆ ಅನ್ನೋ ಕುತೂಹಲವಿದೆ.
ಸರ್ವಪಕ್ಷ ಸಭೆಯಲ್ಲಿ ಕಾವೇರಿ, ಮಹದಾಯಿ, ಕೃಷ್ಣ ನದಿಗಳ ವಿವಾದ ಸೇರಿದಂತೆ ಹಲವು ವಿಚಾರಗಳನ್ನು ಚರ್ಚಿಸಲಾಗುತ್ತೆ ಎಂದು ತಿಳಿದು ಬಂದಿದೆ. ಸರ್ಕಾರದ ವಿರುದ್ಧ ಹಲವು ಭ್ರಷ್ಟಾಚಾರದ ಗಂಭೀರ ಆರೋಪಿಗಳನ್ನು ಮಾಡಿರುವ ವಿಪಕ್ಷ ನಾಯಕರು ನಾಳೆ ಸಿಎಂ, ಡಿಸಿಎಂ ಸೇರಿದಂತೆ ಸರ್ಕಾರದ ಭಾಗವಾಗಿರುವ ಸಚಿವರು ಎದುರು ಬದರು ಆಗಲಿದ್ದಾರೆ.