ಸಿದ್ದರಾಮಯ್ಯ ನಮ್ಮನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲಿ: ಪರಮೇಶ್ವರ

109

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ನಾನು ಸಿಎಂ, ಡಿಸಿಎಂ ಹುದ್ದೆಯ ಆಕಾಂಕ್ಷಿಯಾಗಿದ್ದೆ. ಹೈಕಮಾಂಡ್ ಈಗ ನಿರ್ಧಾರ ತೆಗೆದುಕೊಂಡಿದೆ. ಸಿದ್ದರಾಮಯ್ಯ 2ನೇ ಬಾರಿಗೆ ಮುಖ್ಯಮಂತ್ರಿ ಆಗುತ್ತಿದ್ದಾರೆ. ನಮ್ಮನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲಿ ಎಂದು ಮಾಜಿ ಡಿಸಿಎಂ ಡಾ.ಜಿ ಪರಮೇಶ್ವರ್ ಹೇಳಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದಲಿತ ಸಮುದಾಯದ ನಿರೀಕ್ಷೆ ಬಹಳ ಇದೆ. ಇದನ್ನು ಅರ್ಥ ಮಾಡಿಕೊಂಡು ಹೈಕಮಾಂಡ್ ನಿರ್ಧಾರ ಮಾಡುತ್ತೆ. ಒಂದು ವೇಳೆ ಮಾಡದೆ ಹೋದರೆ ಸಮುದಾಯದ ಸ್ವಾಭಾವಿಕ ಪ್ರತಿಕ್ರಿಯೆ ಇರುತ್ತೆ. ಈಗಲೇ ಎಚ್ಚೆತ್ತುಕೊಳ್ಳುವುದು ಒಳ್ಳೆಯದು ಎಂದು ಎಚ್ಚರಿಕೆ ಮಾತುಗಳನ್ನಾಡಿದ್ದಾರೆ.

ಇಂದು ಸಂಜೆ 7.30ಕ್ಕೆ ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ ಶಾಸಕಾಂಗದ ಸಭೆ ನಡೆಯಲಿದೆ. ಸಭೆಯಲ್ಲಿ ಔಪಚಾರಿಕವಾಗಿ ಸಿದ್ದರಾಮಯ್ಯ ಸಿಎಂ ಎಂದು, ಡಿ.ಕೆ ಶಿವಕುಮಾರ್ ಡಿಸಿಎಂ ಎಂದು ಘೋಷಿಸಲಾಗುತ್ತೆ. ನಾಳೆ ಸಿದ್ದರಾಮಯ್ಯ, ಡಿ.ಕೆ ಶಿವಕುಮಾರ್ ಮತ್ತೆ ದೆಹಲಿಗೆ ತೆರಳಿ ಸಚಿವ ಸಂಪುಟದ ಬಗ್ಗೆ ಚರ್ಚಿಸಲಿದ್ದಾರೆ. ಮೊದಲ ಹಂತದಲ್ಲಿ 8-10 ಹಿರಿಯ ಶಾಸಕರು ಸಚಿವರಾಗಲಿದ್ದಾರೆ.




Leave a Reply

Your email address will not be published. Required fields are marked *

error: Content is protected !!