ರಾಯಚೂರು: ಮಳೆಯಿಂದಾಗಿ ಕಲಬುರಗಿ ಜಿಲ್ಲೆಯ ಗ್ರಾಮವಾಸ್ತವ್ಯ ಮುಂದೂಡಿದ್ದ ಸಿಎಂ, ಇದೀಗ ರಾಯಚೂರು ಜಿಲ್ಲೆಯಲ್ಲಿ ತಮ್ಮ ಮುಂದಿನ ಗ್ರಾಮವಾಸ್ತವ್ಯದ ಪ್ಲಾನ್ ಮಾಡಿದ್ದಾರೆ. ಇದಕ್ಕಾಗಿ ಸಕಲ ರೀತಿಯ ಸಿದ್ಧತೆಗಳು ನಡೆದಿವೆ.
ರಾಯಚೂರು ಜಿಲ್ಲೆ ಮಾನ್ವಿ ತಾಲೂಕಿನ ಕರೇಗುಡ್ಡದಲ್ಲಿ ಜೂನ್ 26ರಂದು ಸಿಎಂ ಕುಮಾರಸ್ವಾಮಿ ಅವರು ಗ್ರಾಮವಾಸ್ತವ್ಯ ಮಾಡಲಿದ್ದಾರೆ. ಇದಕ್ಕಾಗಿ ಅಗತ್ಯ ವ್ಯವಸ್ಥೆಯನ್ನ ಜಿಲ್ಲಾಡಳಿತ ಮಾಡ್ತಿದೆ. ಜಿಲ್ಲಾ ಉಸ್ತುವಾರಿ ಸಚಿವ ವೆಂಕಟರಾವ ನಾಡಗೌಡ ಸಿದ್ಧತೆಗಳ ಪರಿಶೀಲನೆ ನಡೆಸಿದ್ರು.
ಬೃಹತ್ ವೇದಿಕೆ ನಿರ್ಮಾಣ, ವಿವಿಧ ಕಡೆಯಿಂದ ಬರುವ ಜನರಿಗೆ ಕುಳಿತುಕೊಳ್ಳಲು ಕುರ್ಚಿ, ಪಾರ್ಕಿಂಗ್ ವ್ಯವಸ್ಥೆ ಸೇರಿದಂತೆ ಪ್ರತಿಯೊಂದರ ಬಗ್ಗೆ ಪರಿಶೀಲನೆ ನಡೆಸಿದ್ರು. ಈ ಬಗ್ಗೆ ಮಾಧ್ಯಮದ ಜೊತೆ ಮಾತ್ನಾಡಿದ ಸಚಿವರು, ರಾಯಚೂರು ವಿವಿಗೆ ಸಂಬಂಧಿಸಿದಂತೆ ರಾಜ್ಯಪಾಲರನ್ನ ಭೇಟಿಯಾಗಿ ನಂತರ ಮುಂದಿನ ಕಾರ್ಯಕ್ರಮ ಕೈಗೊಳ್ಳಲಾಗುವುದು ಅಂತಾ ತಿಳಿಸಿದ್ರು.
ಮಾನ್ವಿಯಲ್ಲಿ ಮಿನಿ ವಿಧಾನಸೌಧ ನಿರ್ಮಾಣ, ರಿಂಗ್ ರೋಡ್ ನಿರ್ಮಾಣ, ಕ್ರೀಡಾಗಂಣ ನಿರ್ಮಾಣ, ರಾಯಚೂರಲ್ಲಿ ಐಐಟಿ ಸ್ಥಾಪನೆ ಸೇರಿದಂತೆ ಬಹುತೇಕ ಬೇಡಿಕೆಗಳನ್ನ ಸಿಎಂ ಕುಮಾರಸ್ವಾಮಿ ಈಡೇರಿಸಲಿದ್ದಾರೆ ಅಂತಾ ಹೇಳಿದ್ರು. ಈ ವೇಳೆ ಬಿಜೆಪಿ ಅವರು ಪ್ರತಿಭಟನೆ ನಡೆಸುವ ಸಾಧ್ಯತೆಯಿದೆ. ಸಿಎಂ ಭದ್ರತೆಗೆ ಸಂಬಂಧಿಸಿದಂತೆ ಪೊಲೀಸ್ರು ಕ್ರಮ ಕೈಗೊಳ್ತಾರೆ ಅಂತಾ ಸಚಿವರು ತಿಳಿಸಿದ್ರು.