ಬ್ರೇಕಿಂಗ್ ನ್ಯೂಸ್
Search

‘ಹೆಗಡೆ ಸೇರಿ ಯಾರೇ ಸಂವಿಧಾನದ ವಿರುದ್ಧ ಮಾತನಾಡಿದರೂ ಒಪ್ಪಲ್ಲ’

50

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಕಾಂಗ್ರೆಸ್ ನವರು ಈಗ ಸಂವಿಧಾನದ ಬಗ್ಗೆ ಮಾತನಾಡುತ್ತಿದ್ದಾರೆ. ಸಂವಿಧಾನ ಬುಡಮೇಲು ಮಾಡಿ ತುರ್ತು ಪರಿಸ್ಥಿತಿ ಹೇರಿದ್ದರು. ಭಗವದ್ಗೀತೆಗಿಂತಲೂ ಸಂವಿಧಾನ ಶ್ರೇಷ್ಠ ಎಂದು ಪ್ರಧಾನಿ ಹೇಳಿದ್ದಾರೆ. ಅನಂತಕುಮಾರ್ ಹೆಗಡೆ ಸೇರಿ ಯಾರೇ ಸಂವಿಧಾನದ ವಿರುದ್ಧ ಮಾತನಾಡಿದರೂ ಪಕ್ಷ ಒಪ್ಪಲ್ಲ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಹೇಳಿದ್ದಾರೆ.

ಶನಿವಾರ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಚುನಾವಣೆ ಬಂದಾಗ ಕಾಂಗ್ರೆಸ್ ಪ್ರಧಾನಿ ಮೋದಿ ವಿರುದ್ಧ ಕೀಳುಮಟ್ಟದಲ್ಲಿ ನಿಂದನೆ ಮಾಡುತ್ತದೆ. ಹಿಟ್ಲರ್, ಮುಸಲೋನಿಗೆ ಹೋಲಿಸುತ್ತದೆ. ಆದರೆ, ನಿಜವಾದ ಹಿಟ್ಲರ್ ಕಾಂಗ್ರೆಸ್ ಎಂದರು.

ಬಿಜೆಪಿ-ಜೆಡಿಎಸ್ ಮೈತ್ರಿಯಿಂದಾಗಿ ರಾಜ್ಯದಲ್ಲಿ ಬಿಜೆಪಿ ಶಕ್ತಿ ಹೆಚ್ಚಿದೆ. ಹಳೇ ಮೈಸೂರು ಭಾಗದಲ್ಲಿ ಅನುಕೂಲವಾಗಲಿದೆ. ಮೈಸೂರು, ಚಾಮರಾಜನಗರಗಳಲ್ಲಿ ಸೋಲಿನ ಭೀತಿಯಿಂದಾಗಿ ಸಿದ್ದರಾಮಯ್ಯನವರು ಸಂಸದ ಶ್ರೀನಿವಾಸ್ ಪ್ರಸಾದ್ ಮನೆಗೆ ಹೋಗಿದ್ದಾರೆ. ಅವರಿಗೆ ಮಾನ ಮರ್ಯಾದೆ ಇಲ್ಲ ಎಂದು ಕಿಡಿ ಕಾರಿದರು.




Leave a Reply

Your email address will not be published. Required fields are marked *

error: Content is protected !!