ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಿಸಲಾಗಿದೆ. ಏಪ್ರಿಲ್ 13ರಿಂದ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಪ್ರಾರಂಭ. ಕಾಂಗ್ರೆಸ್ 2 ಪಟ್ಟಿಯನ್ನು ಬಿಡುಗಡೆ ಮಾಡಿದೆ. ಜೆಡಿಎಸ್ 1 ಪಟ್ಟಿಯನ್ನು ಬಿಡುಗಡೆಗೊಳಿಸಿದೆ. ಇದೆ ರೀತಿ ಕೆಆರ್ ಎಸ್, ಆಪ್ ಸಹ 100ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ತಮ್ಮ ಅಭ್ಯರ್ಥಿಗಳನ್ನು ಘೋಷಿಸಿದ್ದಾರೆ. ಆದರೆ, ಬಿಜೆಪಿ ಮಾತ್ರ ಇನ್ನು ಇದರ ಬಗ್ಗೆ ಚಕಾರ ಎತ್ತುತ್ತಿಲ್ಲ.
ಸಿಎಂ ಬೊಮ್ಮಾಯಿ, ಮಾಜಿ ಸಿಎಂ ಯಡಿಯೂರಪ್ಪ ಏಪ್ರಿಲ್ ಮೊದಲ ವಾರದಲ್ಲಿ ಪಟ್ಟಿ ಬಿಡುಗಡೆಯಾಗುತ್ತೆ ಎಂದಿದ್ದರು. ಆದರೆ, ಇನ್ನು ಬಿಡುಗಡೆಯಾಗಿಲ್ಲ. ಹೀಗಾಗಿ ವಿಪಕ್ಷಗಳು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿವೆ. ಬಿಜೆಪಿಗೆ ಭಯ ಹುಟ್ಟಿದೆ. ಸೋಲುವ ಭಯ ಕಾಡುತ್ತಿದೆ. ಹೀಗಾಗಿ ಅಭ್ಯರ್ಥಿಗಳನ್ನು ಘೋಷಣೆ ಮಾಡಲು ಹಿಂದೇಟು ಹಾಕುತ್ತಿದೆ ಎಂದು ಕುಟುಕುತ್ತಿವೆ.
ಕೇಂದ್ರ ಹಾಗೂ ರಾಜ್ಯ ಬಿಜೆಪಿ ಸರ್ಕಾರದ ದುರಾಡಳಿತದ ವಿರುದ್ಧ ಜನರು ತಿರುಗಿ ಬಿದ್ದಿದ್ದಾರೆ. ಈ ಕರ್ನಾಟಕದಲ್ಲಿ ಬಿಜೆಪಿ ಸೋಲಲಿದೆ. ಹೀಗಾಗಿ ಅಭ್ಯರ್ಥಿಗಳನ್ನು ಘೋಷಿಸಲು ತಡ ಮಾಡುತ್ತಿದ್ದು, ಕೊನೆ ಕ್ಷಣದಲ್ಲಿ ಘೋಷಣೆ ಮಾಡಿ ಬಂಡಾಯ ಅಭ್ಯರ್ಥಿಗಳು ಎಲ್ಲಿಯೂ ಹೋಗದಂತೆ ಮಾಡಿ ಕಟ್ಟಿ ಹಾಕುವ ಕೆಲಸ ಎಂದು ಹೇಳಲಾಗುತ್ತಿದೆ. ಇನ್ನೊಂದು ಕಡೆ ಬಹುತೇಕ ಹಾಲಿ ಶಾಸಕರಿಗೆ ಟಿಕೆಟ್ ನೀಡುವ ಮೂಲಕ ಇರುವ ಸ್ಥಾನಗಳನ್ನು ಉಳಿಸಿಕೊಳ್ಳುವ ಕೆಲಸವಂತೆ.
ಇನ್ನು ರಾಜ್ಯದಿಂದ ನಾಳೆ ಬಿಜೆಪಿ ಪಟ್ಟಿ ಹೋಗಲಿದೆಯಂತೆ. ಅಲ್ಲಿ ಕೋರ್ ಕಮಿಟಿ ಸಭೆಯಲ್ಲಿ ರಾಜ್ಯದಿಂದ ಕಳುಹಿಸಿರುವ ಅಭ್ಯರ್ಥಿಗಳ ಹೆಸರು ನೋಡಿಕೊಂಡು ಅದರಲ್ಲಿ ಯಾರಿಗೆ ಟಿಕೆಟ್ ಕೊಡಬೇಕು ಅನ್ನೋ ತೀರ್ಮಾನವಾಗಲಿದೆ ಎಂದು ಹೇಳಲಾಗುತ್ತಿದ್ದು, ನಾಳೆ ಏನಾದರೂ ಮೊದಲ ಪಟ್ಟಿ ಬಿಡುಗಡೆಯಾಗುತ್ತಾ ಕಾದು ನೋಡಬೇಕು.