ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ ಕೊಟ್ಟಿದ್ಯಾಕೆ?

193

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಸೋಮವಾರ ಅನುಸೂಚಿತ ಜಾತಿ, ಬುಡಕಟ್ಟು ರಾಜ್ಯ ಅಭಿವೃದ್ಧಿ ಪರಿಷತ್ ಸಭೆ ನಡೆಸಲಾಯಿತು. ಈ ವೇಳೆ ಎಸ್.ಸಿ.ಎಸ್.ಪಿ, ಟಿ.ಎಸ್.ಪಿ ಅನುದಾನದ ಕುರಿತು ಚರ್ಚಿಸಲಾಯಿತು. ಈ ಅನುದಾನವನ್ನು ಖರ್ಚು ಮಾಡದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುವ ಎಚ್ಚರಿಕೆ ನೀಡಿದರು.

ಈ ವೇಳೆ ಎಲ್ಲ ಇಲಾಖೆಗಳ ಕಾರ್ಯಕ್ರಮದ ವಿವರದ ಕುರಿತ ಕ್ರಿಯಾಯೋಜನೆ ಬಗ್ಗೆ ಚರ್ಚಿಸಿ ಅನುಮೋದನೆ ಪಡೆಯಲಾಯಿತು. ಈ ವರ್ಷ 34,221.49 ಕೋಟಿ  ರೂಪಾಯಿ ಎಸ್.ಸಿ.ಎಸ್.ಪಿ, ಟಿ.ಎಸ್.ಪಿ ಯೋಜನೆಗೆ ಮೀಸಲು ಇಡಲಾಗಿದೆ. ಕಳೆದ ವರ್ಷ ಬಾಕಿ ಉಳಿದ 72.20 ಕೋಟಿ ರೂಪಾಯಿ ಸೇರಿಸಿ ಅನುದಾನ ನೀಡಲಾಗಿದೆ. ಯೋಜನೆ ಅನುಷ್ಠಾನ ಸಂಬಂಧ ಹೆಚ್ಚಿನ ಅನುದಾನ ಉಳಿದರೆ ಪ್ರತಿ ಮೂರು ತಿಂಗಳಿಗೊಮ್ಮೆ ಸಭೆ ನಡೆಸಿ ಮರು ಹಂಚಿಕೆ ಕುರಿತು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಸಿಎಮ ತಿಳಿಸಿದರು.

ಇನ್ನು ಪ್ರತಿ ಇಲಾಖೆಯ ಎಸ್.ಸಿ.ಎಸ್.ಪಿ, ಟಿ.ಎಸ್.ಪಿ ಅನುಷ್ಠಾನದ ಕುರಿತು ವರದಿ ಸಿದ್ದಪಡಿಸಬೇಕು. ಈ ಅನುದಾನದ ಫಲಾನುಭವಿಗಳಲ್ಲಿ ಆದ ಬದಲಾವಣೆ ಕುರಿತು ಮಾಹಿತಿ ಸಲ್ಲಿಸಬೇಕು ಎಂದರು. ಈ ವೇಳೆ ಸಚಿವರಾದ ಹೆಚ್.ಸಿ ಮಹಾದೇವಪ್ಪ, ಪ್ರಿಯಾಂಕ್ ಖರ್ಗೆ, ಹೆಚ್.ಕೆ ಪಾಟೀಲ, ಎಂ.ಸಿ ಸುಧಾಕರ್, ರಾಜ್ಯಸಭಾ ಸದಸ್ಯ ಡಾ.ಎಲ್.ಹನುಮಂತಯ್ಯ, ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ವಿವಿಧಿ ಇಲಾಖೆ ಅಧಿಕಾರಿಗಳು ಸೇರಿ ಇತರರು ಹಾಜರಿದ್ದರು.




Leave a Reply

Your email address will not be published. Required fields are marked *

error: Content is protected !!