ಪ್ರಜಾಸ್ತ್ರ ಅಪರಾಧ ಸುದ್ದಿ
ವಿಜಯಪುರ: ಕ್ಷುಲ್ಲಕ ಕಾರಣಕ್ಕೆ ಪತ್ನಿಯನ್ನ ಪತಿ ಕೊಲೆ ಮಾಡಿರುವ ಘಟನೆ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ಸಿಂದಗೇರಿ ಗ್ರಾಮದಲ್ಲಿ ನಡೆದಿದೆ. ಸಿಂದಗೇರಿ ಗ್ರಾಮದ ನಿವಾಸಿ ಶಾರದಾ ಹತ್ಯೆಯಾದ ದುರ್ದೈವಿ.
ಶರದಾ ಪತಿ ಹಣಮಂತ ಮಚ್ಚಿನಿಂದ ಹೊಡೆದು ಕೊಲೆ ಮಾಡಿದ್ದಾನೆ. ಆರೋಪಿ ಹಣಮಂತ ಕಳೆದ ಎರಡ್ಮೂರು ದಿನಗಳಿಂದ ಹೆಂಡ್ತಿಯ ಮನೆಯಲ್ಲಿ ವಾಸವಾಗಿದ್ದನಂತೆ. ಶುಕ್ರವಾರ ಬೆಳಗಿನ ಜಾವ ಜಗಳವಾಗಿದೆ. ಈ ವೇಳೆ ಮಚ್ಚಿನಿಂದ ಹೊಡೆದು ಕೊಲೆ ಮಾಡಿದ್ದಾನೆ. ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
ಆರೋಪಿ ಪತಿ ಹಣಮಂತನನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಬಗ್ಗೆ ಬಸವನಬಾಗೇಬಾಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.