ಪ್ರಜಾಸ್ತ್ರ ಬ್ರೇಕಿಂಗ್ ನ್ಯೂಸ್
ಹುಬ್ಬಳ್ಳಿ: ಕ್ಷುಲ್ಲಕ ಕಾರಣಕ್ಕೆ ಪತ್ನಿಯನ್ನ ಪತಿಯೇ ಭೀಕರವಾಗಿ ಕೊಲೆ ಮಾಡಿದ ಘಟನೆ ತಾಲೂಕಿನ ಬಂಡಿವಾಡ ಕ್ರಾಸ್ ನಲ್ಲಿ ನಡೆದಿದೆ. ಶಾರವ್ವ ಕೊಲೆಯಾದ ದುರ್ದೈವಿ ಎಂದು ತಿಳಿದು ಬಂದಿದೆ.
ಹುಬ್ಬಳ್ಳಿ ತಾಲೂಕಿನ ಬಂಡಿವಾಡ ಗ್ರಾಮದ ಕ್ಯಾರವ್ವ (ಶಾರವ್ವ) ಕುರ್ಡಿಕೇರಿ ಕೊಲೆಯಾದ ದುರ್ದೈವಿಯಾಗಿದ್ದಾಲೆ. ಪಾಪಿ ಪತಿ ಹನುಮಂತ ಎಂಬಾತ ಕೊಲೆ ಮಾಡಿದ್ದು, ಕೊಲೆಗೆ ಕಾರಣ ತಿಳಿದು ಬಂದಿಲ್ಲ. ಆರೋಪಿ ಪಾಪಿ ಪತಿ ಹನುಮಂತನನ್ನ ಬಂಧಿಸಲಾಗಿದೆ. ಈ ಸಂಬಂಧ ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.