ರಾಮನಗರ: ಸಂಸಾರಿಕ ಕಲಹದ ಹಿನ್ನೆಲೆಯಲ್ಲಿ ಪತಿಯಿಂದಲೇ ಪತ್ನಿಯ ಹತ್ಯೆಯಾಗಿದೆ. ತಾಲೂಕಿನ ಗಟ್ಟಿಪುರ ಹತ್ತಿರದ ಅರಳೆಕಟ್ಟೆ ದೊಡ್ಡಿಯಲ್ಲಿ ನಡೆದಿದೆ. 35 ವರ್ಷದ ಪಾವರ್ತಿ ಕೊಲೆಯಾದ ದುರ್ದೈವಿ.
ಬೆಂಗಳೂರಿನಲ್ಲಿ ವಾಸವಾಗಿರುವ ಸ್ವಾಮಿ ಮುನಿಯಪ್ಪ ಎಂಬಾತ ಹಬ್ಬ ಮಾಡುವುದಾಗಿ ಹೆಂಡ್ತಿಯನ್ನ ಕರೆದುಕೊಂಡು ಬಂದಿದ್ದಾನೆ. ಸಂಜೆ ಹೊಲಕ್ಕೆ ಕರೆದುಕೊಂಡು ಹೋದ ಮುನಿಯಪ್ಪ ಮಾರಕಾಸ್ತ್ರಗಳಿಂದ ತಲೆಗೆ ಹೊಡೆದಿದ್ದಾನೆ. ಬಳಿಕ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿದ್ದಾನೆ.
ಪತ್ನಿಯನ್ನ ಕೊಲೆ ಮಾಡಿದ ಬಳಿಕ ಪೊಲೀಸ್ರಿಗೆ ಹೋಗಿ ಶರಣಾಗಿದ್ದಾನೆ. ಈ ಸಂಬಂಧ ಮಾಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.