ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ರಿಲೀಸ್ ಮಾಡಲು ಮೀನಾಮೇಷ ಎಣಿಸುತ್ತಿದೆ. ಹೀಗಾಗಿ ವಿಪಕ್ಷಗಳು ವಾಗ್ದಾಳಿ ನಡೆಸಿವೆ. ಜೊತೆಗೆ ಬಿಜೆಪಿ ನಾಯಕರಲ್ಲಿ ಟೆನ್ಷನ್ ಹೆಚ್ಚಾಗಿದೆ. ದೆಹಲಿ, ಬೆಂಗಳೂರಲ್ಲಿ ಬೀಡು ಬಿಟ್ಟಿದ್ದಾರೆ. ಇನ್ನೊಂದು ಕಡೆ ಹಾಲಿ ಬಿಜೆಪಿ ಶಾಸಕರಲ್ಲಿ 16 ಮಂದಿಗೆ ಟಿಕೆಟ್ ಕೈ ತಪ್ಪುತ್ತೆ ಎಂದು ಹೇಳಲಾಗುತ್ತಿದೆ.
ಈಗಾಗ್ಲೇ ಬಿಜೆಪಿ ಆಂತರಿಕ ಸಮೀಕ್ಷೆ ನಡೆಸಿದೆ. ತಾಲೂಕು, ಜಿಲ್ಲಾ ಮಟ್ಟದಲ್ಲಿ ಅಭಿಪ್ರಾಯ ಸಂಗ್ರಹಿಸಿದೆ. ಇದರ ಆಧಾರದ ಮೇಲೆ ಇತ್ತೀಚೆಗೆ ನಡೆದ ಗುಜರಾತ್ ಹಾಗೂ ಹಿಮಚಲ ಪ್ರದೇಶ ಚುನಾವಣೆ ಮಾದರಿಯಂತೆ ಕರ್ನಾಟಕದಲ್ಲಿಯೂ ಹೊಸಬರಿಗೆ ಟಿಕೆಟ್ ನೀಡುವ ಪ್ಲಾನ್ ಮಾಡಿದೆಯಂತೆ.
ಹಿರಿಯ ಶಾಸಕರು, ಕಳಂಕ ಹೊತ್ತುಕೊಂಡವರು, ಪಕ್ಷಕ್ಕೆ ಸಾಕಷ್ಟು ಡ್ಯಾಮೇಜ್ ಮಾಡಿದವರು, ಮತಕ್ಷೇತ್ರದಲ್ಲಿ ಗೆಲುವಿನ ವಿಶ್ವಾಸ ಕಳೆದುಕೊಂಡವರು, ಜನಾಕ್ರೋಶಕ್ಕೆ ಒಳಗಾದವರು ಸೇರಿದಂತೆ ಹಲವು ರೀತಿಯಲ್ಲಿ ಸಮೀಕ್ಷೆ ನಡೆಸಿ ಹಾಲಿ ಶಾಸಕರ ಬದಲು ಹೊಸಬರಿಗೆ, ಯುವಕರಿಗೆ ಟಿಕೆಟ್ ನೀಡಲು ಮುಂದಾಗಿದೆಯಂತೆ. ಹೀಗಾಗಿ ಯಾರು ಆ 16 ಜನ ಟಿಕೆಟ್ ತಪ್ಪಿಸಿಕೊಳ್ಳುತ್ತಿರುವ ಶಾಸಕರು ಅನ್ನೋ ಪ್ರಶ್ನೆ ಮೂಡಿದೆ.
ನಾಳೆ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಎಂದು ಹೇಳಲಾಗುತ್ತಿದೆ. ಇದರಲ್ಲಿ ಏನಾದರೂ ಇದರ ಸುಳಿವು ಸಿಗಬಹುದಾ ಅಥವ ನಾಮಪತ್ರ ಸಲ್ಲಿಕೆಯ ಕೊನೆಯ ತನಕ ಕುತೂಹಲ ಉಳಿಸಬಹುದಾ ಅನ್ನೋದು ಮುಂದಿನ ದಿನಗಳಲ್ಲಿ ತಿಳಿಯಲಿದೆ.