ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಸ್ಯಾಂಡಲ್ ವುಡ್ ಅಭಿನಯ ಚಕ್ರವರ್ತಿ, ಕಿಚ್ಚ ಸುದೀಪ್, ಅವರಿಗೆ ಕಾಂಗ್ರೆಸ್ ಗಾಳ ಹಾಕಿದೆ ಎಂದು ಹೇಳಲಾಗುತ್ತಿದೆ. ನಟಿ, ಮಾಜಿ ಸಂಸದೆ ರಮ್ಯಾ ಮೂಲಕ ಕಾಂಗ್ರೆಸ್ ಪಕ್ಷಕ್ಕೆ ಆಹ್ವಾನ ನೀಡಲಾಗಿದೆ ಅನ್ನೋ ಸುದ್ದಿ ಭರ್ಜರಿಯಾಗಿ ಹರಿದಾಡುತ್ತಿದೆ.
2023ರ ವಿಧಾನಸಭಾ ಚುನಾವಣೆಯಲ್ಲಿ ಶಿವಮೊಗ್ಗ ಅಥವ ಚಿತ್ರದುರ್ಗದಿಂದ ಟಿಕೆಟ್ ಕೊಡಲು ಆಫರ್ ನೀಡಿದೆಯಂತೆ. ಸ್ವತಃ ರಾಹುಲ್ ಗಾಂಧಿ ಅವರು ಮೂಲಕವೂ ಆಹ್ವಾನ ಹೋಗಿದೆ ಎಂದು ಸಹ ಚರ್ಚೆ ನಡೆದಿದೆ. ಚಂದನವನದಿಂದ ಮತ್ತೊಬ್ಬ ಸ್ಟಾರ್ ನಟ ರಾಜಕೀಯ ಪ್ರವೇಶಿಸಲಿದ್ದಾರೆ ಎನ್ನಲಾಗುತ್ತಿದ್ದು, ನಟ ಸುದೀಪ್ ಅವರಿಂದ ಅಧಿಕೃತ ಮಾಹಿತಿ ಹೊರ ಬೀಳಬೇಕಿದೆ.