ಪ್ರಜಾಸ್ತ್ರ ಸುದ್ದಿ
ಹುಬ್ಬಳ್ಳಿ: ನನಗೆ ರಾಜಕೀಯ ನಿವೃತ್ತಿ ಪಡೆಯಲಿ ಎಂದು ಹೇಳುವ ಪ್ರಧಾನಿ ಮೋದಿ, ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ರಾಜಕೀಯ ಬಿಡುತ್ತಾರೆಯೇ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಪ್ರಶ್ನಿಸಿದ್ದಾರೆ.
ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜನರ ಆಶೀರ್ವಾದ ಎಲ್ಲಿಯವರೆಗೆ ಇರುತ್ತೋ ಅಲ್ಲಿಯವರೆಗೂ ರಾಜಕೀಯದಲ್ಲಿ ಇರುತ್ತಾರೆ. ನಾಲ್ಕು ಬಾರಿ ಸಿಎಂ, ಎರಡು ಬಾರಿ ಪ್ರಧಾನಿ ಆಗಿರುವ ಮೋದಿ, ನಾಲ್ಕು ಬಾರಿ ಸಂಸದರಾಗಿ ಕೇಂದ್ರ ಸಚಿವರಾಗಿರುವ ಜೋಶಿ ಅವರು ರಾಜಕೀಯ ಬಿಡುತ್ತಾರೆಯೇ? ನನ್ನ ಹಿರಿತನದ ಮೇಲೆ ಸಚಿವ ಸ್ಥಾನ ದೊರೆತಿದೆ ಎಂದು ವಾಗ್ದಾಳಿ ನಡೆಸಿದರು.