ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ರಾಜ್ಯದಲ್ಲಿ ವಾಡಿಕೆಗಿಂತ ಈ ಬಾರಿ ಮಳೆ ಕೊರತೆ ಕಾಣಿಸಿಕೊಂಡಿದೆ. ಇದರಿಂದಾಗಿ 100ಕ್ಕೂ ಹೆಚ್ಚು ತಾಲೂಕುಗಳಲ್ಲಿ ಬರಗಾಲ ಮೂಡಿದೆ. ಬೆಳೆದ ಬೆಳೆಗೆ ನೀರಿಲ್ಲದೆ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಇನ್ನೊಂದು ಕಡೆ ಕುಡಿಯುವ ನೀರಿಗೂ ಸಮಸ್ಯೆ ತಲೆ ದೋರಿದೆ.
ಕಂದಾಯ ಸಚಿವರ ನೇತೃತ್ವದಲ್ಲಿ ಇಂದು ಸಿಎಂ ಸಭೆ ನಡೆಸಲಿದ್ದಾರಂತೆ. ಸಭೆಯಲ್ಲಿ ರಾಜ್ಯದ ಯಾವ ಜಿಲ್ಲೆಯ ಎಷ್ಟು ತಾಲೂಕುಗಳಲ್ಲಿ ಬರದ ಪರಿಸ್ಥಿತಿ ಇದೆ ಅನ್ನೋದರ ಕುರಿತು ಚರ್ಚೆ ನಡೆಯಲಿದೆ. ಜಂಟಿ ಸರ್ವೇ ಬಳಿಕ ಬರ ಘೋಷಣೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಹೀಗಾಗಿ ಇಂದು ಬರ ಘೋಷಣೆಯಾಗುತ್ತಾ ಅನ್ನೋದು ಕಾದು ನೋಡಬೇಕು.