ಇಂದು ವಿಪಕ್ಷ ನಾಯಕನ ಆಯ್ಕೆ ಆಗುತ್ತಾ?

135

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಬಿಜೆಪಿ ಹಲವು ರೀತಿಯ ಲೆಕ್ಕಾಚಾರ ಹಾಕಿ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನವನ್ನು ಮಾಜಿ ಸಿಎಂ ಯಡಿಯೂರಪ್ಪ ಮಗ ಶಾಸಕ ವಿಜಯೇಂದ್ರಗೆ ನೀಡಿದೆ. ಇದೀಗ ವಿಪಕ್ಷ ನಾಯಕನ ಆಯ್ಕೆ ನಡೆಸಿದ್ದು, ಇಂದು ಸಂಜೆ 6 ಗಂಟೆಗೆ ಶಾಸಕಾಂಗ ಪಕ್ಷದ ಸಭೆ ಕರೆದಿದೆ.

ನಗರದ ಐಟಿಸಿ ಗಾರ್ಡೇನಿಯಾದಲ್ಲಿ ಸಭೆ ನಡೆಯಲಿದೆ. ಹೀಗಾಗಿ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ದುಶ್ಯಂತ್ ಕುಮಾರ್ ಗೌತಮ್ ವೀಕ್ಷಕರಾಗಿ ಭಾಗವಹಿಸಲಿದ್ದು, ಇಂದು ಬೆಂಗಳೂರಿಗೆ ಆಗಮಿಸಿದ್ದಾರೆ.

ಯಡಿಯೂರಪ್ಪ ಮನಗೆ ಭೇಟಿ ನೀಡಿದ ನಾಯಕರು ಹಲವು ವಿಚಾರಗಳು ಕುರಿತು ಮಾತನಾಡಿದರು. ಈ ವೇಳೆ ನೂತನ ರಾಜ್ಯಾಧ್ಯಕ್ಷ ವಿಜಯೇಂದ್ರ, ಶಾಸಕ ಸುರೇಶಗೌಡ, ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ ರಜೇಶ್.ಜಿ ವಿ ಹಾಜರಿದ್ದರು.




Leave a Reply

Your email address will not be published. Required fields are marked *

error: Content is protected !!