ನವದೆಹಲಿ: ಚುನಾವಣೆಯಲ್ಲಿ ಗೆದ್ದು ಬರುವ ವಿಧಾನಸಭೆ ಹಾಗೂ ಲೋಕಸಭೆಯ ಅಭ್ಯರ್ಥಿಗಳ ಅಪರಾಧಿ ಹಿನ್ನೆಲೆಯನ್ನ 48 ಗಂಟೆಯೊಳಗೆ ಪ್ರಕಟಿಸಬೇಕು ಅಂತಾ ಎಲ್ಲ ರಾಜಕೀಯ ಪಕ್ಷಗಳಿಗೆ ಸುಪ್ರೀಂ ಡೆಡ್ ಲೈನ್ ನೀಡಿದೆ.
ಲಾಯರ್ ಅಶ್ವಿನಿ ಉಪಾಧ್ಯಾಯ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಅಪರಾಧಿ ಹಿನ್ನೆಲೆ ಹೊಂದಿರುವ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಕಾರಣಗಳೇನು ಅನ್ನೋದರ ಬಗ್ಗೆ, ರಾಜಕೀಯ ಪಕ್ಷಗಳು ತಮ್ಮ ವೆಬ್ ಸೈಟ್ ನಲ್ಲಿ ಪ್ರಕಟಿಸಲು ನ್ಯಾಯಮೂರ್ತಿ ಪಾಲಿ ಎಸ್ ನಾರಿಮನ್ ನೇತೃತ್ವದ ಪೀಠ ಸೂಚಿಸಿದೆ.
ಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿಗಳ ಅಪರಾಧದ ಹಿನ್ನೆಲೆ ತಿಳಿಸಿವುದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್, 2018 ಸೆಪ್ಟಂಬರ್ ನಲ್ಲಿ ನೀಡಿದ್ದ ತೀರ್ಪಿನ ನಿರ್ದೇಶನಗಳನ್ನು ರಾಜಕೀಯ ಪಕ್ಷಗಳು ಪಾಲಿಸುತ್ತಿಲ್ಲವೆಂದು ಹೇಳಿ ಅರ್ಜಿ ಸಲ್ಲಿಸಲಾಗಿತ್ತು. ಇದರ ವಿಚಾರಣೆಯನ್ನ ಇಂದು ನಡೆಸಿದ ಕೋರ್ಟ್, ರಾಜಕೀಯ ಪಕ್ಷಗಳಿಗೆ 48 ಗಂಟೆಗಳ ಡೆಡ್ ಲೈನ್ ನೀಡಿದೆ.