ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ರಾಜ್ಯದ ಜನತೆ ಚಳಿಯಿಂದ ಬಳಲಿ ಬೆಂಡಾಗುತ್ತಿದ್ದಾರೆ. ಹೀಗಿರುವಾಗ ಮಳೆಯಾಗಲಿದೆ ಅನ್ನೋ ಮುನ್ಸೂಚನೆ ನೀಡಲಾಗಿದೆ. ಬಂಗಾಳಕೊಲ್ಲಿಯಲ್ಲಿ ಸಿದ್ಧವಾಗುತ್ತಿರುವ ಚಂಡಮಾರುತದಿಂದಾಗಿ ಮಳೆಯಾಗಲಿದೆಯಂತೆ.
ಕರ್ನಾಟಕ, ಆಂಧ್ರದಲ್ಲಿ ಮಳೆ ಆಗಲಿದ್ದು, ರಾಜ್ಯದಲ್ಲಿ ಡಿಸೆಂಬರ್ 9ರಿಂದ 12ರ ತನಕ ಬೆಂಗಳೂರು, ಚಾಮರಾಜನಗರ, ಕೋಲಾರ, ತುಮಕೂರು ಭಾಗದಲ್ಲಿ ಮಳೆಯಾಗಲಿದೆಯಂತೆ. ಇನ್ನು ಉತ್ತರ ಒಳನಾಡಿನ ಭಾಗಗಳಾದ ಬಾಗಲಕೋಟೆ, ಕಲಬುರಗಿ, ಯಾದಗಿರಿ ಸೇರಿದಂತೆ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿಯೂ ಮಳೆಯಾಗಲಿದೆ ಎಂದು ತಿಳಿಸಲಾಗಿದೆ.