ಪ್ರಜಾಸ್ತ್ರ ಸುದ್ದಿ
ಬೆಳಗಾವಿ: ಇಲ್ಲಿನ ಸುವರ್ಣಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಮಂಗಳವಾರ ಎಸ್ಸಿ, ಎಸ್ಟಿ ಮೀಸಲಾತಿ ಹೆಚ್ಚಳ ಸೇರಿದಂತೆ ನಾಲ್ಕು ವಿಧೇಯಕಗಳನ್ನು ಮಂಡಿಸಲಾಗಿದೆ. 2022ನೇ ಸಾಲಿನ ಕರ್ನಾಟಕ ಅನುಸೂಚಿತ ಜಾತಿ, ಪಂಗಡಗಳ ವಿಧೇಯಕ ಮಂಡನೆ ಮಾಡಲಾಗಿದೆ.
ಗೃಹ ಸಚಿವ ಆರಗ ಜ್ಞಾನೇಂದ್ರ ಅವರು, 2022ನೇ ಸಾಲಿನ ಕರ್ನಾಟಕ ಭೂ ಕಂದಾಯ(2ನೇ ತಿದ್ದುಪಡಿ) ವಿಧೇಯಕ ಮಂಡಿಸಿದರು. 2022ನೇ ಸಾಲಿನ ಕರ್ನಾಟಕ ವಿಶೇಷ ಹೂಡಿಕೆ ಪ್ರದೇಶ ವಿಧೇಯಕ ಮಂಡನೆ. 2022ನೇ ಸಾಲಿನ ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ತಿದ್ದುಪಡಿ ವಿಧೇಯಕ ಮಂಡನೆ ಸೇರಿ 4 ವಿಧೇಯಕಗಳನ್ನು ಮಂಡಿಸಲಾಗಿದೆ.