ಪ್ರಜಾಸ್ತ್ರ ಸುದ್ದಿ
ಮೈಸೂರು: ಬರಹಗಾರ, ಚಿಂತಕ ಹಾಗೂ ದಲಿತ ಹೋರಾಟಗಾರ ಹಾರೋಹಳ್ಳಿ ರವೀಂದ್ರ ಅವರನ್ನು ಬೆಳಗಾವಿ ಪೊಲೀಸರು ಬಂಧಿಸಿದ್ದಾರೆ. ಚಿಕ್ಕೋಡಿ ಠಾಣೆ ಪೊಲೀಸರು ವರುಣಾದಲ್ಲಿ ಬಂಧಿಸಿದ್ದಾರೆ ಎಂದು ಹೇಳಲಾಗುತ್ತಿದೆ.
2017ರಲ್ಲಿ ಫೇಸ್ ಬುಕ್ ನಲ್ಲಿ ಬರೆದ ಪೋಸ್ಟ್ ವೊಂದಕ್ಕೆ ಸಂಬಂಧಿಸಿದಂತೆ ದೂರು ದಾಖಲಾಗಿತ್ತು. ಆದರೆ, 2019ರಿಂದ ಕೋರ್ಟ್ ಗೆ ಹಾಜರಾಗಿರಲಿಲ್ಲವೆಂದು, ಬಂಧಿಸಲು ಕೋರ್ಟ್ ಆದೇಶಿಸಿದೆ ಎಂದು ಪೊಲೀಸರು ಹೇಳುತ್ತಿದ್ದಾರೆ.
2017ರಲ್ಲಿ ಸಂಸದ ಅನಂತಕುಮಾರ್ ಹೆಗಡೆ ಜಾತ್ಯಾತೀತರಿಗೆ ಅಪ್ಪ ಅಮ್ಮ ಇಲ್ಲ ಎಂದಿದ್ದರು. ಆಗ ದೊಡ್ಡ ಮಟ್ಟದ ವಿರೋಧ ವ್ಯಕ್ತವಾಗಿತ್ತು. ಆಗ ಹಾರೋಹಳ್ಳಿ ರವೀಂದ್ರ ಕಟುವಾಗಿ ಟೀಕಿಸಿ ಫೇಸ್ ಬಕ್ ನಲ್ಲಿ ಬರೆದಿದ್ದರು. ಹಿಂದು ದೇವರುಗಳಿಗೆ ಅಪಮಾನ ಮಾಡಲಾಗಿದೆ ಎಂದು ಚಂದ್ರಶೇಖರ್ ಬಾಪು ಮುಂಡೆ ಎಂಬುವರು ದೂರು ದಾಖಲಿಸಿದ್ದರು.