ಪ್ರಜಾಸ್ತ್ರ ಸುದ್ದಿ
ಮಂಗಳೂರು: ಆಟೋದಲ್ಲಿ ಕುಕ್ಕರ್ ಬಾಂಬ್ ಸ್ಫೋಟ ಸಾಕಷ್ಟು ಆತಂಕ ಮೂಡಿಸಿದೆ. ಇದರ ತನಿಖೆ ನಡೆಯುತ್ತಿರುವ ಬೆನ್ನಲ್ಲೇ, ನಗರದ ಬಸ್ ನಿಲ್ದಾಣದಲ್ಲಿ ಪತ್ತೆಯಾದ ಬ್ಯಾಗ್ ವೊಂದು ಆತಂಕ ಮೂಡಿಸಿತ್ತು.
ಕೆಎಸ್ಆರ್ ಟಿಸಿ ಬಸ್ ನಿಲ್ದಾಣದಲ್ಲಿ ವಾರಸುದಾರರಿಲ್ಲದ ಬ್ಯಾಗ್ ವೊಂದು ಪತ್ತೆಯಾಗಿದೆ. ಇದರಿಂದಾಗಿ ಕೆಲ ಕಾಲ ಆತಂಕ ಸೃಷ್ಟಿಯಾಗಿತ್ತು. ಸ್ಥಳಕ್ಕೆ ಆಗಮಿಸಿದ ಪೊಲೀಸರು ಬ್ಯಾಗ್ ಪರಿಶೀಲಿಸಿದ್ದು, ಯಾವುದೇ ಅಪಯಕಾರಿ ವಸ್ತುಗಳು ಕಂಡು ಬಂದಿಲ್ಲ. ಹಳೆ ಬಟ್ಟೆ, ಪಾತ್ರೆಗಳಿದ್ದು, ಯಾರೋ ಪ್ರಯಾಣಿಕರು ಮರೆತು ಹೋಗಿರಬಹುದು ಎಂದು ಹೇಳಲಾಗಿದೆ.