ನವವಿವಾಹಿತೆ ಅನುಮಾನಸ್ಪದ ರೀತಿಯಲ್ಲಿ ಸಾವು

297

ಪ್ರಜಾಸ್ತ್ರ ಸುದ್ದಿ

ದೇವರಹಿಪ್ಪರಗಿ: ನವ ವಿವಾಹಿತೆ ಅನುಮಾನಸ್ಪದ ರೀತಿಯಲ್ಲಿ ಸಾವನ್ನಪ್ಪಿದ ಘಟನೆ ವಿಜಯಪುರ ಜಿಲ್ಲೆ ದೇವರಹಿಪ್ಪರಗಿ ತಾಲೂಕಿನ ಕೊಂಡಗೂಳಿ ಗ್ರಾಮದಲ್ಲಿ ನಡೆದಿದೆ. ಅರುಣಾ ಶರಣು ಕೆಂಭಾವಿ(22) ಮೃತ ದುರ್ದೈವಿ.

ಆಷಾಢ ಬಳಿಕ ಎರಡು ದಿನಗಳ ಹಿಂದಷ್ಟೇ ಗಂಡನ ಮನೆಗೆ ಬಂದಿದ್ದಳು. ಆದ್ರೆ, ಶನಿವಾರ ಗಂಡನ ಮನೆಯಲ್ಲಿ ಅನುಮಾನಸ್ಪದ ರೀತಿಯಲ್ಲಿ ಸಾವನ್ನಪ್ಪಿದ್ದಾಳೆ. ಮೃತ ಅರುಣಾ ಪತಿ ಶರಣು ಹಾಗೂ ಸಹೋದರಿ ಶೈಲಾ ವಿರುದ್ಧ ಕೊಲೆ ಆರೋಪ ಮಾಡಲಾಗಿದೆ. ಈ ಬಗ್ಗೆ ದೇವರಹಿಪ್ಪರಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.




Leave a Reply

Your email address will not be published. Required fields are marked *

error: Content is protected !!