ಪ್ರಜಾಸ್ತ್ರ ಸುದ್ದಿ
ಕಲಬುರಗಿ: ಸರಿಯಾದ ಸಮಯಕ್ಕೆ ಸರಿಯಾದ ಚಿಕಿತ್ಸೆ ಸಿಗದೆ ಇರುವ ಕಾರಣಕ್ಕೆ ಅಂಗನವಾಡಿ ಕಾರ್ಯಕರ್ತೆ ಸೇರಿ ಇಬ್ಬರು ಮಹಿಳೆಯರು ಸಾವನ್ನಪ್ಪಿದ ಘಟನೆ ನಡೆದಿದೆ. ಆಕ್ಸಿಜನ್ ಹಾಗೂ ವೆಂಟಿಲೇಟರ್ ಕೊರತೆಯಿಂದ ಇಬ್ಬರ ಜೀವ ಹೋಗಿದೆ.
ಹೊನ್ನಕಿರಣಗಿ ಗ್ರಾಮದ ಅಂಗನವಾಡಿ ಕಾರ್ಯಕರ್ತೆ ಅಕ್ಕನಾಗಮ್ಮ ಹಾಗೂ ನಗರದ ಸಾಯಿ ಮಂದಿರ ನಿವಾಸಿಯೊಬ್ಬರು ಸಾವನ್ನಪ್ಪಿದ್ದಾರೆ. ಜೇಮ್ಸ್, ಇಎಸ್ಐ ಆಸ್ಪತ್ರೆ ಸೇರಿ ಹಲವು ಕಡೆ ಅಲೆದಾಡಿದ್ರೂ, ವೆಂಟಿಲೇಟರ್ ಕೊರತೆಯಿಂದ ಚಿಕಿತ್ಸೆ ಸಿಕ್ಕಿಲ್ಲ. ಹೀಗಾಗಿ ಹೈದ್ರಾಬಾದ್ ಗೆ ಸಾಗಿಸುವ ಮಾರ್ಗಮಧ್ಯೆ ಅಕ್ಕನಾಗಮ್ಮ ಸಾವನ್ನಪ್ಪಿದ್ದಾರೆ. ಜಿಮ್ಸ್ ಆಸ್ಪತ್ರೆಯಲ್ಲಿ ಮತ್ತೊಬ್ಬರು ಸಾವನ್ನಪ್ಪಿದ್ದಾರೆ.
ಹೀಗೆ ಸಾವನ್ನಪ್ಪಿದ ಕುಟುಂಬಸ್ಥರು ಆಸ್ಪತ್ರೆ, ಸಿಬ್ಬಂದಿ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ. ಆಕ್ಸಿಜನ್, ವೆಂಟಿಲೇಟರ್ ಕೊರತೆಯ ನೆಪ ಹೇಳಿ ಚಿಕಿತ್ಸೆ ನೀಡಿಲ್ಲವೆಂದಿದ್ದು, ರಾಜ್ಯದಲ್ಲಿ ರೋಗಿಗಳಿಗೆ ಸರಿಯಾದ ಚಿಕಿತ್ಸೆ ಸಿಗದೆ ಸಾವನ್ನಪ್ಪುತ್ತಿರುವ ಪ್ರಕರಣಗಳು ಹೆಚ್ಚಾಗ್ತಿವೆ.