ಪ್ರಜಾಸ್ತ್ರ ಸುದ್ದಿ
ಸುರಪುರ: ಇಲ್ಲಿನ ರಾಜಾ ವೆಂಕಟಪ್ಪ ನಾಯಕ ಬಸ್ ನಿಲ್ದಾಣದಲ್ಲಿ ಮಹಿಳೆಯೊಬ್ಬರ ಶವ ಪತ್ತೆಯಾಗಿದೆ. ಹುಣಸಗಿ ತಾಲೂಕಿನ ಹೆಬ್ಬಾಳ ಬಿ ಗ್ರಾಮದ ಶಾಂತಾ(40) ಎನ್ನಲಾಗ್ತಿರುವ ಮಹಿಳೆಯ ಶವ ಪತ್ತೆಯಾಗಿದೆ.
ಮಹಿಳೆ ಸೋಮವಾರ ಸಂಜೆ ಬಸ್ ನಿಲ್ದಾಣದಲ್ಲಿಯೇ ಉಳಿದುಕೊಂಡಿದ್ದು ಬೆಳಗಾಗುವಷ್ಟರಲ್ಲಿ ಶವವಾಗಿ ಪತ್ತೆಯಾಗಿದ್ದಾರಂತೆ. ಸಾವಿನ ಬಗ್ಗೆ ಅನುಮಾನ ಮೂಡಿದ್ದು, ಮೃತದೇಹವನ್ನ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಸುರಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.