ಪ್ರಜಾಸ್ತ್ರ ಅಪರಾಧ ಸುದ್ದಿ
ಹಾಸನ: ರಾಜ್ಯದಲ್ಲಿ ಮೇಲಿಂದ ಮೇಲೆ ಹತ್ಯೆಗಳು ನಡೆಯುತ್ತಿದ್ದು ಜನರು ಭಯದಲ್ಲಿ ಬದುಕುವಂತಾಗಿದೆ. ರಾಜ್ಯ ಬಿಜೆಪಿ ಸರ್ಕಾರ ವೈಫಲ್ಯಕ್ಕೆ ಮತ್ತೊಂದು ಸಾಕ್ಷಿಯಂಬಂತೆ ಹಾಸನದಲ್ಲಿ ಹಾಡುಹಗಲೇ ಚಿನ್ನಾಭರಣ ಅಂಗಡಿ ಮಾಲೀಕನ ಪತ್ನಿ ಹತ್ಯೆಯಾಗಿದೆ.
ಪೆನ್ಷನ್ ಮೊಹಲ್ಲಾ ಠಾಣೆ ವ್ಯಾಪ್ತಿಯಲ್ಲಿ ಚಿನ್ನಾಭರಣ ಅಂಗಡಿ ಮಾಲೀಕ ಕುಮಾರ್ ಎಂಬುವರ ಪತ್ನಿ ಮಂಜುಳಾ(41) ಮನೆಯಲ್ಲಿ ಒಂಟಿಯಾಗಿದ್ದಾಗ ದುಷ್ಕರ್ಮಿಗಳು ಕೊಲೆ ಮಾಡಿದ್ದಾರೆ. ಕಳ್ಳತನಕ್ಕೆ ಬಂದು ಹತ್ಯೆ ಮಾಡಿರಬಹುದು ಎನ್ನಲಾಗುತ್ತಿದೆ. ಪೊಲೀಸರು ತನಿಖೆ ನಡೆಸಿದ್ದಾರೆ.