ಅಕ್ರಮ ಸಂಬಂಧಕ್ಕೆ ಬೇಸತ್ತು ಮಹಿಳೆ ಹತ್ಯೆ

242

ಪ್ರಜಾಸ್ತ್ರ ಅಪರಾಧ ಸುದ್ದಿ

ಕನಕಪುರ: ವಿವಾಹಿತ ಮಹಿಳೆಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ವ್ಯಕ್ತಿಯೊಬ್ಬ ಆಕೆಯ ಕಾಟದಿಂದ ಬೇಸತ್ತು ಹತ್ಯೆ ಮಾಡಿರುವ ಘಟನೆ ನಡೆದಿದೆ. ಹನಮಂತು(30) ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ನಗರದ ಕುರುಪೇಟೆಯ ಶ್ರುತಿ(32) ಕೊಲೆಯಾದ ಮಹಿಳೆ. ಶ್ರುತಿ ಹಾಗೂ ಹನಮಂತು ನಡುವೆ ಅಕ್ರಮ ಸಂಬಂಧವಿತ್ತು. ಇವರು ಜೊತೆಯಾಗಿ ಕಳೆದ ಖಾಸಗಿ ಕ್ಷಣಗಳನ್ನು ವಿಡಿಯೋ ಮಾಡಿಕೊಂಡಿದ್ದ ಆಕೆ ಮದುವೆಯಾಗುವಂತೆ ಪೀಡಿಸುತ್ತಿದ್ದಳಂತೆ. ಅಲ್ಲದೇ ಆಕೆ ಕರೆದಾಗ ಬರಬೇಕು ಎಂದು ಪದೆಪದೆ ಕಾಲ್ ಮಾಡುತ್ತಿದ್ದಳಂತೆ.

ವಿವಾಹಿತ ಮಹಿಳೆಯೊಂದಗಿನ ಅಕ್ರಮ ಸಂಬಂಧ ಬೇಡವೆಂದು ದೂರ ಇರಲು ಪ್ರಯತ್ನಿಸಿದ್ದಾನೆ. ಆದರೆ, ಆಕೆ ಫೋನ್ ಮಾಡಿ ತೊಂದರೆ ಕೊಡುತ್ತಿದ್ದಳಂತೆ. ಖಾಸಗಿಯಾಗಿ ಕಳೆದ ಕ್ಷಣಗಳ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಹಾಕುತ್ತೇನೆ ಎಂದು ಬೆದರಿಕೆ ಹಾಕಿದ್ದಳಂತೆ. ಇದರಿಂದ ಬೇಸತ್ತ ಹನಮಂತು ಕಳೆದ ಭಾನುವಾರ ರಾತ್ರಿ ಆಕೆಗೆ ಮದ್ಯಪಾನ ಮಾಡಿಸಿ ಮಾರಣ್ಣನದೊಡ್ಡಿ ಗೇಟ್ ಹತ್ತಿರ ಕರೆದುಕೊಂಡು ಬಂದು, ಬೆಲ್ಟ್ ನಿಂದ ಕುತ್ತಿಗೆ ಬಿಗಿದು ಕೊಲೆ ಮಾಡಿ ಪರಾರಿಯಾಗಿದ್ದ.

ಈ ಪ್ರಕರಣ ಸೋಮವಾರ ಬೆಳಗ್ಗೆ ಬೆಳಕಿಗೆ ಬಂದಿದೆ. ಸಾತನೂರು ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದರು. ಆರೋಪಿಯನ್ನು ಪೊಲೀಸರು ಬಂಧಿಸಿದ್ದು, ವಿಡಿಯೋ ಇಟ್ಟುಕೊಂಡು ಬ್ಲ್ಯಾಕ್ ಮೇಲ್ ಮಾಡುತ್ತಿದ್ದಳು. ಹೀಗಾಗಿ ಕೊಲೆ ಮಾಡಿದೆ ಎಂದು ಹೇಳಿದ್ದಾನಂತೆ.




Leave a Reply

Your email address will not be published. Required fields are marked *

error: Content is protected !!