ಪ್ರಜಾಸ್ತ್ರ ಅಪರಾಧ ಸುದ್ದಿ
ಮಂಡ್ಯ: ಜಿಲ್ಲೆಯ ಮದ್ದೂರು ಪಟ್ಟಣದ ವಿವಿ ನಗರದಲ್ಲಿ ಮಂಗಳವಾರ ಸಂಜೆಯೊಂದು ಭಯಾನಕ ಕೃತ್ಯ ನಡೆದಿದ್ದು, ಸ್ಥಳೀಯರು ಬೆಚ್ಚಿ ಬಿದ್ದಿದ್ದಾರೆ. ಮಹಿಳೆಯೊಬ್ಬರನ್ನ ಮಂಚಕ್ಕೆ ಕಟ್ಟಿ ಹಾಕಿ ಉಸಿರುಗಟ್ಟಿಸಿ ಹತ್ಯೆ ಮಾಡಲಾಗಿದೆ.
ಸುಮಾರು 39 ವರ್ಷದ ಮಹಿಳೆಯನ್ನ ಮಂಚಕ್ಕೆ ಕಟ್ಟಿ ಹಾಕಿ ಕೊಲೆ ಮಾಡಲಾಗಿದೆ. ಕೊಲೆಗೂ ಮೊದ್ಲು ಅತ್ಯಾಚಾರವೆಸಗಿರುವ ಶಂಕೆ ವ್ಯಕ್ತವಾಗಿದೆ. ಎಸ್ಪಿ ಕೆ ಪರಶುರಾಮ, ಸಿಪಿಐ ಪ್ರಸಾದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಹೋಗಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸ್ತಿದ್ದಾರೆ.