ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಹಿನ್ನಲೆಯಲ್ಲಿ ಸೋಷಿಯಲ್ ಮೀಡಿಯಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಶುಭ ಕೋರಿದ್ದಾರೆ. ಸ್ವಾವಲಂಬಿ ಬದುಕಿನ ಕನಸು ಕಟ್ಟಿಕೊಂಡಿರುವ ನಾಡಿನ ಕೋಟ್ಯಾಂತರ ಸ್ವಾಭಿಮಾನಿ ಮಹಿಳೆಯರ ಜೊತೆ ನಾವಿದ್ದೇವೆ ಎಂದಿದ್ದಾರೆ.
ಶಕ್ತಿ, ಗೃಹಲಕ್ಷ್ಮಿ, ಕೂಸಿನಮನೆ, ಯುವನಿಧಿ, ಗೃಹಜ್ಯೋತಿ ಯೋಜನೆಗಳು ಮಹಿಳೆಯರಲ್ಲಿ ಆರ್ಥಿಕ, ಸಾಮಾಜಿಕ ಬಲತುಂಬಿ ಮಹಿಳಾ ಸಬಲೀಕರಣದ ನಿಟ್ಟಿನಲ್ಲಿ ನವಯುಗಕ್ಕೆ ನಾಂದಿ ಹಾಡಿವೆ. ಅಂತಾರಾಷ್ಟ್ರೀಯ ಮಹಿಳಾ ದಿನವು ಮಹಿಳೆಯರ ಸಾಧನೆಗಳನ್ನು ಗುರುತಿಸಿ ಗೌರವಿಸುವುದಕಷ್ಟೇ ಸೀಮಿತವಾಗದೆ ಅವರು ಎದುರಿಸುತ್ತಿರುವ ಸಾವಲುಗಳ ಮೇಲೆ ಬೆಳಕು ಚೆಲ್ಲಬೇಕು. ಲಿಂಗಾಧರಿತ ಅಸಮಾನಾತೆ ಮತ್ತು ಶೋಷಣೆಯ ವಿರುದ್ಧ ಮಹಿಳೆಯರ ಹೋರಾಟದಲ್ಲಿ ನಾವೆಲ್ಲರೂ ಜೊತೆಯಲ್ಲಿ ನಿಲ್ಲಬೇಕು ಎಂದಿದ್ದಾರೆ.