ಪ್ರಜಾಸ್ತ್ರ ಸುದ್ದಿ
ಚಿಕ್ಕಮಗಳೂರು: ಬಾವಿ ಕೆಲಸ ಮಾಡುವಾಗ ಮಣ್ಣು ಕುಸಿದುಬಿದ್ದ ಪರಿಣಾಮ ಕಾರ್ಮಿಕನೊಬ್ಬ ಮೃತಪಟ್ಟ ಘಟನೆ ಕಳಸದ ಯಡೂರ ಗ್ರಾಮದಲ್ಲಿ ನಡೆದಿದೆ. ಮನೋಜ(45) ಮೃತ ಕಾರ್ಮಿಕನೆಂದು ತಿಳಿದು ಬಂದಿದೆ.
ಸೋಮವಾರ ಕಳಸದ ಯಡೂರ ಗ್ರಾಮದ ಸುತ್ತಮುತ್ತ ಮಳೆಯಾಗಿದೆ. ಹೀಗಾಗಿ ಮಣ್ಣು ಸಡಿಲಗೊಂಡಿದೆ. ಮಂಗಳವಾರ ಕೆಲಸಕ್ಕೆ ಬಂದ ಕಾರ್ಮಿಕನ ಮೇಲೆ ಮಣ್ಣು ಕುಸಿದುಬಿದ್ದ ಪರಿಣಾಮ ಕಾರ್ಮಿಕ ಮನೋಜ ಸಾವನ್ನಪ್ಪಿದ್ದಾನೆ.