ಅಕ್ರಮ ಬಂಧನಲ್ಲಿದ್ದ 40ಕ್ಕೂ ಹೆಚ್ಚು ಕಾರ್ಮಿಕರ ರಕ್ಷಣೆ

450

ಪ್ರಜಾಸ್ತ್ರ ಸುದ್ದಿ

ವಿಜಯಪುರ: ಜಿಲ್ಲೆಯ ಇಂಡಿ ತಾಲೂಕಿನ ಗುಬ್ಬೇವಾಡ ಗ್ರಾಮದಲ್ಲಿ ಅಕ್ರಮವಾಗಿ ಬಂಧನದಲ್ಲಿದ್ದ 40ಕ್ಕೂ ಹೆಚ್ಚು ಮಧ್ಯಪ್ರದೇಶದ ಕಾರ್ಮಿಕರನ್ನು ರಕ್ಷಿಸಲಾಗಿದೆ. ಇಂಡಿ ಪೊಲೀಸರು ಕಾರ್ಮಿಕರನ್ನು ರಕ್ಷಿಸಿ ಟ್ರೇನ್ ಮೂಲಕ ಮಧ್ಯಪ್ರದೇಶಕ್ಕೆ ಕಳುಹಿಸಿಕೊಟ್ಟಿದ್ದಾರೆ.

ಗ್ರಾಮದ ಕಬ್ಬಿನ ಜಮೀನು ಮಾಲೀಕ ಬಿರಾದಾರ್ ಹಾಗೂ ಮಧ್ಯಪ್ರದೇಶದ ರೋಹಿತ್ ಎಂಬಾತ 400 ಟನ್ ಕಬ್ಬು ಕಟಾವಿಗೆ ಬೆದರಿಕೆ ಹಾಕಿದ್ದರು. ಇದೆ ವಿಚಾರವಾಗಿ ಅವರನ್ನು ಅಕ್ರಮವಾಗಿ ಬಂಧಿಸಲಾಗಿತ್ತು. ಈ ಬಗ್ಗೆ ಕಾರ್ಮಿಕರು ಅದ್ಹೇಗೋ ಮಧ್ಯಪ್ರದೇಶದ ಜಿಲ್ಲಾಧಿಕಾರಿಗೆ ಫೋನ್ ಮಾಡಿದ್ದಾರೆ. ಅವರು ವಿಜಯಪುರ ಎಸ್ಪಿಗೆ ಫೋನ್ ಮಾಡಿ ಮಾಹಿತಿ ನೀಡಿದ್ದಾರೆ.

ಇಂಡಿ ಡಿವೈಎಸ್ಪಿ ಶ್ರೀಧರ್ ದೊಡ್ಡಿ ನೇತೃತ್ವದಲ್ಲಿ 10 ಮಕ್ಕಳು, 35 ಕಾರ್ಮಿಕರನ್ನು ಪೊಲೀಸರು ರಕ್ಷಣೆ ಮಾಡಿದ್ದಾರೆ. ಅಲ್ದೇ, ಅವರನ್ನು ರಾತ್ರಿಯೇ ಮಧ್ಯಪ್ರದೇಶಕ್ಕೆ ರೈಲು ಮೂಲಕ ಕಳುಹಿಸಿ ಕೊಡಲಾಗಿದೆ.




Leave a Reply

Your email address will not be published. Required fields are marked *

error: Content is protected !!