ವಿಜಯಪುರ: ಕರೋನಾ ಲಾಕ್ ಡೌನ್ ನಿಂದಾಗಿ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಲಾಕ್ ಆಗಿದ್ದ ಜಿಲ್ಲೆಯ ಕಾರ್ಮಿಕರು ಇಂದು ನಗರಕ್ಕೆ ಬಂದಿದ್ದಾರೆ. ವಿಜಯಪುರಕ್ಕೆ 6 ಬಸ್ಸಿನಲ್ಲಿ ಸುಮಾರು 185 ಕೂಲಿ ಕಾರ್ಮಿಕರು ಬಂದಿದ್ದಾರೆ.
ಹೀಗೆ ಬಂದ ಕೂಲಿ ಕಾರ್ಮಿಕರಿಗೆ ಬಸ್ ನಿಲ್ದಾಣದಲ್ಲೇ ಆರೋಗ್ಯ ಇಲಾಖೆಯಿಂದ ಥರ್ಮಲ್ ಸ್ಕ್ರೀನಿಂಗ್ ವ್ಯವಸ್ಥೆ ಮಾಡಲಾಗಿದೆ. ಇಲ್ಲಿ ಚೆಕ್ ಮಾಡಿಸಿಕೊಂಡು ಗ್ರಾಮಗಳಿಗೆ ಹೋಗಲು ಜಿಲ್ಲಾಡಳಿತ ಅನುಮತಿ ನೀಡಿದೆ. ಹೀಗಾಗಿ ಕಾರ್ಮಿಕರಿಗೆ ಆರೋಗ್ಯ ತಪಾಸಣೆ ಮಾಡಿಸಲಾಗ್ತಿದೆ.
ಹೀಗೆ ಪರ ಊರುಗಳಿಂದ ಜಿಲ್ಲೆಗೆ ಬರುತ್ತಿರುವ ಕೂಲಿ ಕಾರ್ಮಿಕರ ಆರೋಗ್ಯ ತಪಾಸಣೆ ಜೊತೆಗೆ ಹೋಂ ಕ್ವಾರಂಟೈನ್ನಲ್ಲಿ ಇರಲು ಜಿಲ್ಲಾಡಳಿತ ಕಟ್ಟುನಿಟ್ಟಗಾಗಿ ಸೂಚನೆ ಆದೇಶಿಸಿದೆ.