ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಸ್ವಿಜರ್ಲ್ಯಾಂಡ್ ನ ದಾವೋಸ್ ನಲ್ಲಿ ನಡೆಯಲಿರುವ ವಿಶ್ವ ಆರ್ಥಿಕ ಶೃಂಗಸಭೆಯಲ್ಲಿ ಕರ್ನಾಟಕ ಮುಖ್ಯಮಂತ್ರಿ ಬೊಮ್ಮಾಯಿ ಹಾಗೂ ತೆಲಂಗಾಣ ಮುಖ್ಯಮಂತ್ರಿಗೆ ಆಹ್ವಾನ ನೀಡಲಾಗಿದೆ. ಹೀಗಾಗಿ ಮೇ 21ರಂದು ದಾವೋಸ್ ಗೆ ಹೋಗುವುದು ಪಕ್ಕಾ ಆಗಿದೆ ಎನ್ನಲಾಗುತ್ತಿದೆ.
ಬಿಜೆಪಿ ಆಂತರಿಕ ವಿಚಾರ, ವಿಧಾನ ಪರಿಷತ್ ಹಾಗೂ ರಾಜ್ಯಸಭೆ ಚುನಾವಣೆ ಹಿನ್ನೆಲೆಯಲ್ಲಿ ಸಂಪುಟ ಪುನರ್ ರಚನೆ ಚಟುವಟಿಕೆಗಳಿಗೆ ಸಧ್ಯಕ್ಕೆ ಬ್ರೇಕ್ ಬಿದ್ದಿದೆ. ಹೀಗಾಗಿ ಸಿಎಂ ಬೊಮ್ಮಾಯಿ ದಾವೋಸ್ ಗೆ ಹೋಗುವುದು ಬಹುತೇಕ ಖಚಿತ ಎನ್ನಲಾಗುತ್ತಿದೆ.
ಮೇ 21ರಿಂದ 26ರ ತನಕ ಸಮ್ಮೇಳನ ನಡೆಯಲಿದೆ. ಈ ಬಗ್ಗೆ ಮಾತನಾಡಿರುವ ಸಿಎಂ, ತಮ್ಮ ಬದುಲು ಅಧಿಕಾರಿಗಳನ್ನು ಅಥವ ಬೇರೆ ಯಾರನ್ನಾದರೂ ಕಳುಹಿಸಬೇಕಾಗಬಹುದು ಎಂದಿದ್ದರು. ಆದರೆ, ಇಂದು ನಡೆದ ಕೋರ್ ಕಮಿಟಿ ಸಭೆಯಲ್ಲಿನ ವಿಚಾರಗಳನ್ನು ನೋಡಿದರೆ, ಸಿಎಂ ಬೊಮ್ಮಾಯಿ ಅವರೆ ಹೋಗಬಹುದು ಎಂದು ಹೇಳಲಾಗುತ್ತಿದೆ.