Search

ಪ್ರಕೃತಿ ನಾಶ, ನಮ್ಮ ನಾಶ: ಸಿಎಂ ಸಿದ್ದರಾಮಯ್ಯ

91

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ನಗರದ ಜ್ಞಾನಜ್ಯೋತಿ ಸಭಾಂಗಣದಲ್ಲಿ ಅರಣ್ಯ ಇಲಾಖೆ ವತಿಯಿಂದ ವಿಶ್ವ ಪರಿಸರ ದಿನ ಆಚರಿಸಲಾಯಿತು. ಕಾರ್ಯಕ್ರಮವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್, ಸಚಿವರಾದ ಈಶ್ವರ್ ಖಂಡ್ರೆ, ದಿನೇಶ್ ಗುಂಡೂರಾವ್, ಕೆ.ಜೆ ಜಾರ್ಜ್ ಸೇರಿ ಇತರರು ಉದ್ಘಾಟಿಸಿದರು.

ಈ ವೇಳೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಮನುಷ್ಯ ಪ್ರಕೃತಿಯ ಅವಿಭಾಜ್ಯ ಅಂಗ. ಪ್ರಕೃತಿ ಜೊತೆ ನಾವು ಬೆಳೆಯಬೇಕು. ಬಾಳಬೇಕು. ಒಂದು ವೇಳೆ ಪ್ರಕೃತಿ ನಾಶವಾದರೆ ನಾವು ನಾಶವಾಗುತ್ತೇವೆ ಅಂತಾ ಹೇಳಿದರು. ಸಂಕಷ್ಟದಲ್ಲಿರುವ ನಾಡಿನ ಬಡ ಹಾಗೂ ಮಧ್ಯಮ ವರ್ಗದ ಜನರಿಗಾಗಿ ಉಚಿತ ವಿದ್ಯುತ್ ನೀಡುತ್ತಿದ್ದೇವೆ. ಜನರು ಇದನ್ನು ಸ್ವೀಕರಿಸಿದ್ದಾರೆ. ಆದರೆ, ಜನರಿಂದ ತಿರಸ್ಕೃತಗೊಂಡ ಬಿಜೆಪಿ ವಿದ್ಯುತ್ ದುರ್ಬಳಕೆ ಮಾಡಲು ಕುಮ್ಮಕ್ಕು ಕೊಡುತ್ತಿದೆ ಎಂದು ಆರೋಪಿಸಿದರು.

ಪರಿಸರದ ಕುರಿತು ಸಾಕಷ್ಟು ಕೆಲಸ ಮಾಡುತ್ತಿರುವ ಸಾಧಕರಿಗೆ ಕರ್ನಾಟಕ ರಾಜ್ಯ ಪರಿಸರ ಪ್ರಶಸ್ತಿ ನೀಡಿ ಗೌರವಿಸಲಾಯಿತು.




Leave a Reply

Your email address will not be published. Required fields are marked *

error: Content is protected !!