ಪ್ರಜಾಸ್ತ್ರ ಸುದ್ದಿ
ಉಡುಪಿ: ವಿಶ್ವದೆಲ್ಲಡೆ ಆಗಸ್ಟ್ 13ರಂದು ವಿಶ್ವ ಅಂಗಾಂಗ ದಾನ ದಿನವನ್ನಾಗಿ ಆಚರಣೆ ಮಾಡಲಾಗ್ತಿದೆ. ಈ ಬಗ್ಗೆ ಟ್ವೀಟ್ ಮೂಲಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶುಭ ಕೋರಿದ್ದಾರೆ. ಈ ವೇಳೆ ಮಾತ್ನಾಡಿದ ಅವರು ನಾನು ಅಂಗಾಂಗ ದಾನಕ್ಕೆ ಸಹಿ ಹಾಕಲು ನಿರ್ಧರಿಸಿದ್ದೇನೆ ಎಂದರು.
ಅಂಗಾಂಗ ದಾನ ಮಾಡುವುದ್ರಿಂದ ಇನ್ನೊಬ್ಬರ ಜೀವ ಉಳಿಯುತ್ತದೆ. ಹಾಗಿದ್ದ ಮೇಲೆ ನಾವ್ಯಾಕೆ ಅಂಗಾಂಗ ದಾನ ಮಾಡಬಾರದು? ನಮ್ಮ ಮರಣಾ ನಂತರ ಮತ್ತೊಬ್ಬರ ಜೀವ ಉಳಿಸಬಹುದಾದರೆ ಪ್ರತಿಯೊಬ್ಬರು ಅಂಗಾಂಗ ದಾನಕ್ಕೆ ಮುಂದಾಗಬೇಕು ಎಂದು ಸಲಹೆ ನೀಡಿದ್ರು.