ಪ್ರಜಾಸ್ತ್ರ ಸಾಹಿತ್ಯ ಮತ್ತು ರಂಗಭೂಮಿ
ಬೆಂಗಳೂರು: ಕನ್ನಡದ ಹಿರಿಯ ಕವಿ, ಚಿಂತಕ ಜರಗನಹಳ್ಳಿ ಶಿವಶಂಕರ(72) ಇಂದು ಬೆಳಗ್ಗೆ ನಿಧನರಾಗಿದ್ದಾರೆ. ಕರೋನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಅವರನ್ನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೆ ಇಂದು ಬೆಳಗ್ಗೆ ನಿಧನರಾಗಿದ್ದಾರೆ.
ಬೆಂಗಳೂರಿನ ಜರಗನಹಳ್ಳಿ ಅವರಾದ ಶಿವಶಂಕರ ಅವರು, 28 ವರ್ಷಗಳ ಕಾಲ ಬ್ಯಾಂಕಿನಲ್ಲಿ ಸೇವೆ ಸಲ್ಲಿಸಿದವರು. ಮುಂದೆ 2001ರಲ್ಲಿ ಸ್ವಯಂ ನಿವೃತ್ತಿ ಪಡೆದರು. ಆಲಿಕಲ್ಲು, ವಚನ ಧ್ಯಾನ, ಮರಗಳು, ಮಳೆ, ವಚನ ನೆರಳು, ಆಯ್ದ ಹನಿಗಳು, ಸ್ಪ್ರಿಂಗ್, ದೇವರ ನೆರಳು ಸೇರಿದಂತೆ ಹಲವು ಕೃತಿಗಳನ್ನ ರಚಿಸಿದ್ದಾರೆ.
ಇವರಿಗೆ ದಿನಕರ ದೇಸಾಯಿ ಪ್ರಶಸ್ತಿ, ಕನ್ನಡ ರಾಜ್ಯೋತ್ಸವ ಪ್ರಶಸ್ತಿ, ಸುವರ್ಣ ಕರ್ನಾಟಕ ಭೂಷಣ ಸೇರಿದಂತೆ ಹಲವು ಪ್ರಶಸ್ತಿಗಳು ದೊರೆತಿವೆ.