ಸಾಹಿತಿ ಕೆ.ಬಿ ಸಿದ್ದಯ್ಯ ನಿಧನ

377

ತುಮಕೂರು: ಅಪಘಾತದಿಂದ ಗಾಯಗೊಂಡಿದ್ದ ಸಾಹಿತಿ ಕೆ.ಬಿ ಸಿದ್ದಯ್ಯ ಚಿಕಿತ್ಸೆ ಫಲಕಾರಿಯಾಗದೇ ಇಂದು ಬೆಳಗಿನ ಜಾವ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ.

ಕೆಲ ದಿನಗಳ ಹಿಂದೆ ಅಪಘಾತದಿಂದ ಗಾಯಗೊಂಡಿದ್ದ ಅವರು, ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ರು. ಆದ್ರೆ, ಚಿಕಿತ್ಸೆ ಫಲಿಸದೆ ಇಂದು ಬೆಳಗಿನ ಜಾವ 4.15ಕ್ಕೆ ಕೊನೆಯುಸಿರೆಳದಿದ್ದಾರೆ. ಸಿದ್ಧಾರ್ಥ ಪದವಿ ಪೂರ್ವ ಕಾಲೇಜಿನಲ್ಲಿ ಇಂಗ್ಲಿಷ್ ಪ್ರಾಧ್ಯಾಪಕರಾಗಿ ಕಾರ್ಯನಿರ್ವಹಿಸಿ ನಿವೃತ್ತಿ ಹೊಂದಿದ್ರು. ದಲಿತ ಚಳವಳಿಯಲ್ಲಿ ತೊಡಗಿಸಿಕೊಂಡಿದ್ದ ಕೆ.ಬಿ ಸಿದ್ದಯ್ಯ ಅವರು, ದಕ್ಕಲ ಕಥಾದೇವಿ, ಬಲ್ಲೆಬಾನಿ ಸೇರಿದಂತೆ ಹಲವು ಖಂಡಕಾವ್ಯಗಳನ್ನ ರಚನೆ ಮಾಡಿದ್ರು.




Leave a Reply

Your email address will not be published. Required fields are marked *

error: Content is protected !!