ಕಲಾಗ್ರಾಮದಲ್ಲಿ ಕವಿ ಸಿದ್ಧಲಿಂಗಯ್ಯ ಅಂತ್ಯಕ್ರಿಯೆ

234

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಶುಕ್ರವಾರ ನಿಧನರಾದ ಖ್ಯಾತ ಹಿರಿಯ ಕವಿ ಸಿದ್ಧಲಿಂಗಯ್ಯನವರ ಅಂತ್ಯಕ್ರಿಯೆ ಕಲಾಗ್ರಾಮದಲ್ಲಿ ಇಂದು ಮಧ್ಯಾಹ್ನ ಸಕಲ ಸರ್ಕಾರಿ ಗೌರವಗಳೊಂದಿಗೆ ನಡೆಯಲಿದೆ ಎಂದು ತಿಳಿದು ಬಂದಿದೆ.

ರಾಷ್ಟ್ರಕವಿ ಜಿ.ಎಸ್ ಶಿವರುದ್ರಪ್ಪನವರ ಸಮಾಧಿ ಪಕ್ಕದಲ್ಲಿ, ಬೌದ್ಧ ಧರ್ಮದ ವಿಧಿವಿಧಾನಗಳಂತೆ ಅಂತ್ಯ ಸಂಸ್ಕಾರ ನಡೆಯಲಿದೆ. ಜ್ಞಾನಭಾರತಿ ಕ್ಯಾಂಪಸ್ ನ ಅಂಬೇಡ್ಕರ್ ಅಧ್ಯಯನ ಭವನದಲ್ಲಿ ಬೆಳಗ್ಗೆ 10 ಗಂಟೆಯ ತನಕ ಸಾರ್ವಜನಿಕ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ.

ಸಾರ್ವಜನಿಕರ ದರ್ಶನದ ಬಳಿಕ ಹಿರಿಯ ಕವಿಯ ಅಂತ್ಯಸಂಸ್ಕಾರ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಲಿದೆ.




Leave a Reply

Your email address will not be published. Required fields are marked *

error: Content is protected !!