ಹಿರಿಯ ಕವಿ ಸಿದ್ದಲಿಂಗಯ್ಯ ನಿಧನಕ್ಕೆ ಪ್ರಧಾನಿ ಸಂತಾಪ

273

ಪ್ರಜಾಸ್ತ್ರ ಸುದ್ದಿ

ನವದೆಹಲಿ: ಹಿರಿಯ ಕವಿ, ಸಾಹಿತಿ, ಸಾಮಾಜಿಕ ಹೋರಾಟಗಾರ ಡಾ.ಸಿದ್ಧಲಿಂಗಯ್ಯನವರು ಇಂದು ಸಂಜೆ ಕರೋನಾ ಸೋಂಕಿನಿಂದ ನಿಧನರಾಗಿದ್ದಾರೆ. ಇವರ ನಿಧನಕ್ಕೆ ಸಿಎಂ ಯಡಿಯೂರಪ್ಪ, ವಿಪಕ್ಷ ನಾಯಕ ಸಿದ್ದರಾಮಯ್ಯ, ಹೆಚ್.ಡಿ ಕುಮಾರಸ್ವಾಮಿ ಸೇರಿದಂತೆ ಸಾಹಿತಿಗಳು, ಅಭಿಮಾನಿಗಳು, ಶಿಷ್ಯರು ಸಂತಾಪ ಸೂಚಿಸಿದ್ದಾರೆ.

ಇನ್ನು ಪ್ರಧಾನಿ ಮೋದಿ ಟ್ವೀಟ್ ಮೂಲಕ ಅಗಲಿದ ಹಿರಿಯ ಚೇತನಕ್ಕೆ ಸಂತಾಪ ಸೂಚಿಸಿದ್ದಾರೆ. ಅವರ ಅಗಲಿಕೆ ತುಂಬಾ ನೋವು ತಂದಿದೆ. ಸಾಮಾಜಿಕ ನ್ಯಾಯಕ್ಕಾಗಿ ಅವರ ಕವಿತೆ, ಬರಹಗಳು ಅಪಾರ ಕೊಡುಗೆ ಸಲ್ಲಿಸಿವೆ. ಅವರ ಕುಟುಂಬ ಹಾಗೂ ಹಿತೈಷಿಗಳಿಗೆ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದಿದ್ದಾರೆ.




Leave a Reply

Your email address will not be published. Required fields are marked *

error: Content is protected !!