ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಸರ್ಕಾರಿ ಕಚೇರಿಗಳಲ್ಲಿ ಖಾಸಗಿಯವರು ಫೋಟೋ ತೆಗೆಯಬಾರದು, ವಿಡಿಯೋ ಮಾಡಬಾರದು ಎಂದು ಶುಕ್ರವಾರ ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು. ಇದಕ್ಕೆ ವಿಪಕ್ಷಗಳಿಂದ, ಸಾರ್ವಜನಿಕರಿಂದ ತೀವ್ರ ಆಕ್ರೋಶ ವ್ಯಕ್ತವಾದ ಹಿನ್ನಲೆಯಲ್ಲಿ ರಾತ್ರಿ ಆದೇಶವನ್ನು ಹಿಂದಕ್ಕೆ ಪಡೆಯಿತು.
ತನ್ನ ನಡೆಯಿಂದ ತೀವ್ರ ಮುಜುಗರ ಅನುಭವಿಸಿದ ರಾಜ್ಯ ಸರ್ಕಾರ ಆದೇಶ ಹೊರಡಿಸಿದ ಕೆಲ ಗಂಟೆಗಳಲ್ಲೇ ಅದನ್ನು ವಾಪಸ್ ಪಡೆಯಿತು. ಹೀಗೆ ವಾಪಸ್ ಪಡೆದ ಆದೇಶ ಪತ್ರದಲ್ಲಿ ಕನ್ನಡದ ಕಗ್ಗೊಲೆ ಮಾಡಲಾಗಿದೆ. ಅದೇನು ಅನ್ನೋದು ಇಲ್ಲಿದೆ ನೋಡಿ.