ಯಾದಗಿರಿಯಲ್ಲಿ ರಥದ ಗೋಪುರ ಬಿದ್ದು ಐವರ ಸ್ಥಿತಿ ಗಂಭೀರ

668

ಪ್ರಜಾಸ್ತ್ರ ಸುದ್ದಿ

ಯಾದಗಿರಿ: ತಾಲೂಕಿನ ಬಳಿಚಕ್ರ ಗ್ರಾಮದಲ್ಲಿ ಆತ್ಮಲಿಂಗೇಶ್ವರ ಜಾತ್ರೆಯ ರಥೋತ್ಸವ ನಡೆದಿದೆ. ಈ ವೇಳೆ ರಥದ ಮೇಲಿನ ಗೋಪುರ ಮುರಿದುಬಿದ್ದು ಐವರ ಸ್ಥಿತಿ ಗಂಭೀರವಾಗಿದೆ. ಅನೇಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ರಥ ಎಳೆಯುತ್ತಿದ್ದ ಸಂದರ್ಭದಲ್ಲಿ ಮೇಲಿನ ಗೋಪುರ ಮುರಿದುಕೊಂಡು ಬಿದ್ದಿದ್ರಿಂದ ಈ ಅನಾಹುತ ಸಂಭವಿಸಿದೆ. ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ಸಂಬಂಧ ಸೈದಾಪೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.




Leave a Reply

Your email address will not be published. Required fields are marked *

error: Content is protected !!