ಯಕ್ಷಗಾನ ಅಕಾಡೆಮಿ ಅಧ್ಯಕ್ಷ ದಂಟ್ಕಲ್ ನಿಧನ

234

ಪ್ರಜಾಸ್ತ್ರ ಸಾಹಿತ್ಯ ಮತ್ತು ರಂಗಭೂಮಿ

ಕಾರವಾರ: ಕರ್ನಾಟಕ ರಾಜ್ಯ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಎಂ.ಎ ಹೆಗಡೆ ದಂಟ್ಕಲ್(73) ಭಾನುವಾರ ನಿಧನರಾಗಿದ್ದಾರೆ. ಇವರಿಗೆ ಕೋವಿಡ್ ಸೋಂಕು ಕಾಣಿಸಿಕೊಂಡಿತ್ತು. ಹೀಗಾಗಿ ಉಸಿರಾಟದ ತೊಂದರೆಯಾಗಿದೆ. ಆಸ್ಪತ್ರೆಗೆ ದಾಖಲಿಸುವಷ್ಟರಲ್ಲಿ ನಿಧನರಾಗಿದ್ದಾರೆ.

ತಾಳಮದ್ದಲೆ ಅರ್ಥದಾರಿಯಾಗಿದ್ದ ದಂಟ್ಕಲ್ ಅವರು ತಮ್ಮದೆಯಾದ ಛಾಪು ಮೂಡಿಸಿದ್ದರು. ಎರಡು ಅವಧಿಗೆ ಯಕ್ಷಗಾನ ಅಕಾಡೆಮಿ ಅಧ್ಯಕ್ಷರಾಗಿದ್ದು, ಸಿಡಿ, ಪುಸ್ತಕ ಪ್ರಕಟಣೆ ಸೇರಿದಂತೆ ಹಲವು ಕಾರ್ಯಕ್ರಮಗಳನ್ನ ಮಾಡಿಕೊಂಡು ಬರ್ತಿದ್ದರು. ಲಾಕ್ ಡೌನ್ ಸಮಯದಲ್ಲಿ ವರ್ಚುವಲ್ ಮೂಲಕ ಮಾತಿನ ಮಂಟಪ ಕಾರ್ಯಕ್ರಮ ಆಯೋಜಿಸಿ 70 ಜನ ಕಲಾವಿದರನ್ನ ಸಂದರ್ಶಿಸಿದ್ದರು.

ಎಂ.ಎ ಹೆಗಡೆ ದಂಟ್ಕಲ್ ನಿಧನಕ್ಕೆ ನಾಡಿನ ಗಣ್ಯರು ಸಂತಾಪ ಸೂಚಿಸಿದ್ದಾರೆ. ಇವರ ನಿಧನದಿಂದಾಗಿ ಯಕ್ಷಗಾನ ಕ್ಷೇತ್ರಕ್ಕೆ ಬಹುದೊಡ್ಡ ನಷ್ಟವೆಂದು ಕಿರಿಯ ಕಲಾವಿದರು ಕಂಬನಿ ಮಿಡಿದಿದ್ದಾರೆ.




Leave a Reply

Your email address will not be published. Required fields are marked *

error: Content is protected !!