ಪ್ರಜಾಸ್ತ್ರ ಸುದ್ದಿ
ಸಿಂದಗಿ: ಕೋವಿಡ್ 19 ಸೋಂಕು ಹಾಗೂ ಸರ್ಕಾರದ ಆದೇಶದ ಹಿನ್ನೆಲೆ ತಾಲೂಕಿನ ಪ್ರಸಿದ್ಧ ಯಂಕಂಚಿ ದಾವಲ್ ಮಲಿಕ್ ಜಾತ್ರೆಯನ್ನು ರದ್ದುಗೊಳಿಸಲಾಗಿದೆ. ಈ ಬಗ್ಗೆ ದೇವಸ್ಥಾನ ಆಡಳಿತ ಮಂಡಳಿ ಪ್ರಕಟಣೆ ಹೊರಡಿಸಲಿದೆ ಎಂದು ತಿಳಿದು ಬಂದಿದೆ.
ಫೆಬ್ರವರಿ 1ರಿಂದ 9ರ ತನಕ ನಡೆಯಬೇಕಿದ್ದ ಜಾತ್ರೆಯನ್ನು ರದ್ದುಗೊಳಿಸಲಾಗಿದೆ. ಈ ಸಂಬಂಧ ತಾಲೂಕು ದಂಡಾಧಿಕಾರಿ ಸಂಜೀವಕುಮಾರ ದಾಸರ ಅಧ್ಯಕ್ಷತೆಯಲ್ಲಿ ಶುಕ್ರವಾರ, ದೇವಸ್ಥಾನ ಆಡಳಿತ ಮಂಡಳಿ ಹಾಗೂ ಊರಿನ ಮುಖಂಡರೊಂದಿಗೆ ಸಭೆ ನಡೆಸಿ ತಿಳಿಸಲಾಗಿದೆ. ಹೀಗಾಗಿ ವಿಜೃಂಭಣೆಯ ಜಾತ್ರೆ, ಸಾಂಸ್ಕೃತಿಕ ಕಾರ್ಯಕ್ರಮಗಳು ಯಾವುದೇ ನಡೆಯದೆ ಸರಳ ಧಾರ್ಮಿಕ ಪೂಜೆ ಪುನಸ್ಕಾರಗಳು ಕೋವಿಡ್ ಮಾರ್ಗಸೂಚಿಯಂತೆ ನಡೆಯಲಿವೆ ಎಂದು ತಹಶೀಲ್ದಾರ್ ಸಂಜೀವಕುಮಾರ ದಾಸರ ತಿಳಿಸಿದ್ದಾರೆ.
ಈ ವೇಳೆ ತಾಲೂಕು ಪಂಚಾಯ್ತಿ ಇಓ ಕೆ.ಹೊಂಗಯ್ಯ, ಸಿಪಿಐ ರವಿ ಉಕ್ಕುಂದ , ಪಿಎಸ್ಐ ನಿಂಗಪ್ಪ ಪೂಜಾರಿ ಸೇರಿದಂತೆ ಊರಿನ ಮುಖಂಡರು ಭಾಗವಹಿಸಿದ್ದರು.