ನವದೆಹಲಿ: ಯೆಸ್ ಬ್ಯಾಂಕ್ ಸೂಪರ್ ಸೀಡ್ ಮಾಡಿರುವ ಹಿನ್ನೆಲೆಯಲ್ಲಿ ಆತಂಕಕ್ಕೆ ಒಳಗಾಗಿರುವ ಗ್ರಾಹಕರಿಗೆ, ವಿತ್ ಸಚಿವೆ ನಿರ್ಮಲಾ ಸೀತಾರಾಮನ್ ಭರವಸೆ ನೀಡಿದ್ದಾರೆ. ನಿಮ್ಮ ಹಣ ಸುರಕ್ಷಿತವಾಗಿರುತ್ತೆ. ಆತಂಕ ಪಡುವ ಅಗತ್ಯವಿಲ್ಲ. ಶೀಘ್ರದಲ್ಲಿಯೇ ಯೆಸ್ ಬ್ಯಾಂಕ್ ಬಿಕ್ಕಟ್ಟು ಬಗೆಹರಿಸುತ್ತೇವೆ ಎಂದು ತಿಳಿಸಿದ್ದಾರೆ.
ತೀವ್ರ ಆರ್ಥಿಕ ಬಿಕ್ಕಟ್ಟು ಹಾಗೂ ಆಡಳತದಲ್ಲಿನ ಪಾರದರ್ಶಕತೆಯಲ್ಲಿ ಲೋಪದೋಷ ಕಂಡುಬಂದ ಹಿನ್ನೆಲೆಯಲ್ಲಿ ಆರ್ ಬಿಐ 30 ದಿನಗಳ ಕಾಲ ಸೂಪರ್ ಸೀಡ್ ಮಾಡಿದೆ. ಅಲ್ದೇ, ಯೆಸ್ ಬ್ಯಾಂಕ್ ಗ್ರಾಹಕರಿಗೆ 50 ಸಾವಿರ ರೂಪಾಯಿ ಮಾತ್ರ ಡ್ರಾ ಮಾಡಲು ಮೀತಿ ಹೇರಲಾಗಿದೆ. ಇದ್ರಿಂದಾಗಿ ಆತಂಕಗೊಂಡ ಗ್ರಾಹಕರು ಎಟಿಎಂ ಮೂಲಕ ಹಣ ಪಡೆಯಲು ಮುಗಿ ಬಿದ್ದಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಯೆಸ್ ಬ್ಯಾಂಕ್ ವಿಚಾರವಾಗಿ ಆರ್ ಬಿಐ ಅಧಿಕಾರಿಗಳ ಜೊತೆ ಮಾತುಕತೆ ನಡೆಸಿದ್ದೇವೆ. ಇದಕ್ಕೆ ಈಗಾಗ್ಲೇ ಕ್ರಮಗಳನ್ನ ತೆಗೆದುಕೊಳ್ಳಲಾಗಿದೆ. ಆದಷ್ಟು ಬೇಗ ಸಮಸ್ಯೆ ಬಗೆಹರಿಯಲಿದೆ. ಅಕೌಂಟರ್ ಗಳ ಹಿತದೃಷ್ಟಿಯಿಂದ ಆರ್ ಬಿಐ ಯೆಸ್ ಬ್ಯಾಂಕ್ ನ್ನ ತಮ್ಮ ಸುಪರ್ದಿಗೆ ಪಡೆದಿದೆ ಎಂದಿದ್ದಾರೆ.