ಪ್ರಜಾಸ್ತ್ರ ಸುದ್ದಿ
ವಿಜಯಪುರ: ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಕಳೆದ ರಾತ್ರಿ ಭರ್ಜರಿಯಾಗಿ ಮಳೆಯಾಗಿದೆ. ಇಷ್ಟು ದಿನ ಸಾಧಾರಣವಾಗಿ ಮಳೆಯಾಗುತಿತ್ತು. ಆದರೆ, ಕಳೆದ ಮಧ್ಯರಾತ್ರಿ ಸುರಿದ ಭಾರೀ ಮಳೆಗೆ ಜನರು ಬೆಚ್ಚಿಬಿದ್ದಿದ್ದಾರೆ. ಚಳಿಯಾಗಲದಲ್ಲಿ ಈ ರೀತಿ ಮಳೆಯಾಗುತ್ತಿರುವುದಕ್ಕೆ ಆತಂಕ ವ್ಯಕ್ತವಾಗುತ್ತಿದೆ.
ಜಿಲ್ಲೆಯ ಸಿಂದಗಿ, ದೇವರಹಿಪ್ಪರಗಿ, ಆಲಮೇಲ ಭಾಗದ ವಿವಿಧ ಹಳ್ಳಿಗಳಲ್ಲಿ ಭಾರೀ ಪ್ರಮಾಣದಲ್ಲಿ ಮಳೆಯಾಗಿದೆ. ಇದರಿಂದಾಗಿ ಬೆಳೆಗಳಿಗೆ ಮತ್ತಷ್ಟು ಹಾನಿಯಾಗಿದೆ. ಅನೇಕ ಕಡೆ ಹೊಲಗಳಲ್ಲಿ ಮಳೆ ನೀರು ನಿಂತುಕೊಂಡಿದೆ. ಹೀಗಾಗಿ ಕೈಗೆ ಬಂದ ತುತ್ತು ಬಾಯಿಗೆ ಬರದಂತಾಗಿದೆ ರೈತರ ಪರಿಸ್ಥಿತಿ.