ಪ್ರಜಾಸ್ತ್ರ ಸುದ್ದಿ
ಧಾರವಾಡ: ಜಿಲ್ಲಾ ಪಂಚಾಯ್ತಿ ಸದಸ್ಯರಾಗಿದ್ದ ಯೋಗೇಶಗೌಡ ಕೊಲೆ ಪ್ರಕರಣ ಸಂಬಂಧ ಸಿಬಿಐನಿಂದ ಬಂಧನಕ್ಕೆ ಒಳಗಾಗಿರುವ ಮಾಜಿ ಸಚಿವ ವಿನಯ ಕುಲರ್ಕಣಿಗೆ ಇನ್ನಷ್ಟು ದಿನ ಜೈಲಿನಲ್ಲಿಯೇ ಕಾಲ ಕಳೆಯಬೇಕಿದೆ. ಮಾಜಿ ಸಚಿವರ ಜಾಮೀನು ಅರ್ಜಿಯ ವಿಚಾರಣೆಯನ್ನ ಕಾಯ್ದಿರಸಲಾಗಿದೆ.
ಬಧುವಾರ ಸಿಬಿಐ ವಿಶೇಷ ಕೋರ್ಟ್ ನಲ್ಲಿ ಜಾಮೀನು ಅರ್ಜಿಯ ವಿಚಾರಣೆ ನಡೆಯಿತು. ಈ ವೇಳೆ ಸಿಬಿಐ ಪರ ವಕೀಲರು ವಿನಯ ಕುಲಕರ್ಣಿಗೆ ಜಾಮೀನು ನೀಡದಂತೆ ಮನವಿ ಸಲ್ಲಿಸಿದ್ರು. ವಾದ-ಪ್ರತಿವಾದ ಆಲಿಸಿದ ಕೋರ್ಟ್ ಡಿಸೆಂಬರ್ 14ಕ್ಕೆ ತೀರ್ಪನ್ನ ಕಾಯ್ದಿರಿಸಿದೆ. ಹೀಗಾಗಿ ವಿನಯ ಕುಲಕರ್ಣಿ ಇನ್ನು ಕೆಲವು ದಿನಗಳ ಕಾಲ ಜೈಲಿನಲ್ಲಿರಬೇಕಾಗಿದೆ.