ಜಾಮೀನಿಗಾಗಿ ಮಾಜಿ ಸಚಿವ ಕುಲಕರ್ಣಿ ಅರ್ಜಿ

256

ಪ್ರಜಾಸ್ತ್ರ ಸುದ್ದಿ

ಧಾರವಾಡ: ಜಿಲ್ಲಾ ಪಂಚಾಯ್ತಿ ಸದಸ್ಯರಾಗಿದ್ದ ಯೋಗೇಶಗೌಡ ಹತ್ಯೆ ಪ್ರಕರಣ ಸಂಬಂಧ, ನ್ಯಾಯಾಂಗ ಬಂಧನದಲ್ಲಿರುವ ಮಾಜಿ ಸಚಿವ ವಿನಯ ಕುಲಕರ್ಣಿ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದಾರೆ. ಜಿಲ್ಲಾ ನ್ಯಾಯಾಲಯದಲ್ಲಿ ಕುಲಕರ್ಣಿ ಪರ ವಕೀಲರು ಅರ್ಜಿ ಸಲ್ಲಿಸಿದ್ದಾರೆ.

ಸೋಮವಾರ ಸಿಬಿಐ ಕಸ್ಟಡಿ ಮುಗಿದ್ರಿಂದ ಕೋರ್ಟ್ ಗೆ ಹಾಜರು ಪಡಿಸಬೇಕಿತ್ತು. ಆದ್ರೆ, ವಿಡಿಯೋ ಕಾನ್ಪ್ ರೆನ್ಸ್ ಮೂಲಕ ನಡೆದ ವಿಚಾರಣೆಯಲ್ಲಿ ನವೆಂಬರ್ 23ರ ತನಕ ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ. ಹೀಗಾಗಿ ವಿನಯ ಕುಲಕರ್ಣಿ ಪರ ವಕೀಲರು ಜಾಮೀನು ಅರ್ಜಿ ಸಲ್ಲಿಸಿದ್ದಾರೆ. ಇದರ ವಿಚಾರಣೆ ಇಂದು ನಡೆಯಲಿದೆ.




Leave a Reply

Your email address will not be published. Required fields are marked *

error: Content is protected !!