9 ತಿಂಗಳ ಬಳಿಕ ವಿನಯ ಕುಲಕರ್ಣಿಗೆ ಜಾಮೀನು

350

ಪ್ರಜಾಸ್ತ್ರ ಸುದ್ದಿ

ಧಾರವಾಡ: ಜಿಲ್ಲಾ ಪಂಚಾಯ್ತಿ ಸದಸ್ಯರಾಗಿದ್ದ ಯೋಗೇಶಗೌಡ ಕೊಲೆ ಪ್ರಕರಣ ಸಂಬಂಧ ಜೈಲು ಪಾಲಾಗಿರುವ ಕಾಂಗ್ರೆಸ್ ಮಾಜಿ ಸಚಿವ ವಿನಯ ಕುಲಕರ್ಣಿಗೆ ಸುಪ್ರೀಂ ಕೋರ್ಟ್ ಷರತ್ತು ಬದ್ಧ ಜಾಮೀನು ನೀಡಿದೆ. ಕಳೆದ 9 ತಿಂಗಳು ಬಳಿಕ ಜಾಮೀನು ಸಿಕ್ಕಿದೆ.

ವಿನಯ ಕುಲಕರ್ಣಿ ಪರ ವಕೀಲರು ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನ ನಡೆಸಿದ ಸುಪ್ರೀಂ ಕೋರ್ಟ್, ಎರಡು ತಿಂಗಳೊಳಗೆ ವಿಚಾರಣೆ ನಡೆಸಬೇಕು ಎಂದು ಹೈಕೋರ್ಟ್ ಗೆ ನಿರ್ದೇಶಿಸಿತು. ಜೊತೆಗೆ ಧಾರವಾಡಕ್ಕೆ ಹೋಗದಂತೆ ವಿನಯ ಕುಲಕರ್ಣಿಗೆ ಷರತ್ತು ವಿಧಿಸಿ ಜಾಮೀನು ನೀಡಿದೆ.

ಕಳೆದ ಜುಲೈ 27, 2020 ರಿಂದ ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿದ್ದಾರೆ. ಇದೀಗ ಜಾಮೀನು ದೊರೆತಿದ್ದು, 9 ತಿಂಗಳ ಬಳಿಕ ಹೊರ ಬರುತ್ತಿದ್ದಾರೆ.




Leave a Reply

Your email address will not be published. Required fields are marked *

error: Content is protected !!