ಮುಂದುವರೆದ ‘ವಿಕು’ ಸೆರೆಮನೆ ವಾಸ

271

ಪ್ರಜಾಸ್ತ್ರ ಸುದ್ದಿ

ಧಾರವಾಡ: ಮಾಜಿ ಸಚಿವ ವಿನಯ ಕುಲಕರ್ಣಿಗೆ ಜೈಲು ವಾಸ ಮುಂದುವರೆದಿದೆ. 14 ದಿನಗಳ ನ್ಯಾಯಾಂಗ ಬಂಧನ ಸೋಮವಾರ ಮುಗಿದ ಕಾರಣ, ಇಂದು ವಿಡಿಯೋ ಕಾನ್ಫ್ ರೆನ್ಸ್ ಮೂಲಕ ವಿಚಾರಣೆ ನಡೆಯಿತು. ಮಾಜಿ ಸಚಿವರ ಪರ ಸಲ್ಲಿಸಿದ್ದ ಜಾಮೀನು ಅರ್ಜಿಗೆ ಹಿನ್ನೆಡೆಯಾಗಿದ್ದು ಮತ್ತೆ 14 ದಿನಗಳ ನ್ಯಾಯಾಂಗ ಬಂಧನ ವಿಸ್ತರಿಸಲಾಗಿದೆ.

ಧಾರವಾಡ 3ನೇ ಹೆಚ್ಚುವರಿ ನ್ಯಾಯಾಲಯ ಆದೇಶ ಹೊರಡಿಸಿದ್ದು ಡಿಸೆಂಬರ್ 7ರ ತನಕ ನ್ಯಾಯಾಂಗ ಬಂಧನ ವಿಸ್ತರಿಸಿ ಆದೇಶ ಹೊರಡಿಸಲಾಗಿದೆ. ಜಿಲ್ಲಾ ಪಂಚಾಯ್ತಿ ಸದಸ್ಯರಾಗಿದ್ದ ಯೋಗೇಶಗೌಡ ಕೊಲೆ ಪ್ರಕರಣ ಸಂಬಂಧ ಸಿಬಿಐ ಅಧಿಕಾರಿಗಳಿಂದ ಅರೆಸ್ಟ್ ಆಗಿದ್ದ ಮಾಜಿ ಸಚಿವರಿಗೆ ನವೆಂಬರ್ 9ರಂದು 14 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿತ್ತು.

ಸೋಮವಾರ ನ್ಯಾಯಾಂಗ ಬಂಧನ ಮುಗಿದ ಕಾರಣ, ಹಿಂಡಲಗಾ ಜೈಲಿನಲ್ಲಿರುವ ವಿನಯ ಕುಲಕರ್ಣಿ ಅವರನ್ನ ವಿಡಿಯೋ ಕಾನ್ಫ್ ರೆನ್ಸ್ ಮೂಲಕ ವಿಚಾರಣೆ ನಡೆಸಿ ಮತ್ತೆ ನ್ಯಾಯಾಂಗ ಬಂಧನ ವಿಸ್ತರಿಸಲಾಗಿದೆ.




Leave a Reply

Your email address will not be published. Required fields are marked *

error: Content is protected !!