ಧಾರವಾಡ: ಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಅಧಿಕಾರಿಗಳು ಇಂದಿನಿಂದ ತನಿಖೆ ಆರಂಭಿಸಿದ್ದಾರೆ.
ತಾಲೂಕಿನ ಗೊವನಕೊಪ್ಪ ಯೋಗಿಶಗೌಡರ ಸಹೋದರ ಗುರುನಾಥಗೌಡ ಮನೆಗೆ ಸಿಬಿಐ ಅಧಿಕಾರಿಗಳು ಇಂದು ಭೇಟಿ ನೀಡಿ ವಿಚಾರಣೆ ನಡೆಸಿದ್ರು. ಬೆಂಗಳೂರಿನಿಂದ ಬಂದಿರುವ ಅಧಿಕಾರಿಗಳ ಟೀಂ ಯೋಗೀಶಗೌಡ ಸಹೋದರ ಗುರುನಾಥಗೌಡ ಸೇರಿದಂತೆ ಕುಟುಂಬ ಸದಸ್ಯರಿಂದ ಮಾಹಿತಿ ಪಡೆಯುತ್ತಿದ್ದಾರೆ.