ವಿಜಯೋತ್ಸವದ ವೇಳೆ ತಲ್ವಾರ್ ಪ್ರದರ್ಶಿಸಿದ ಯುವಕನ ಬಂಧನ

97

ಪ್ರಜಾಸ್ತ್ರ ಸುದ್ದಿ

ವಿಜಯಪುರ: ನಗರದ ಶಾಸಕರಾಗಿ ಬಿಜೆಪಿಯ ಬಸನಗೌಡ ಪಾಟೀಲ ಯತ್ನಾಳ ಮತ್ತೊಮ್ಮೆ ಆಯ್ಕೆ ಆಗುತ್ತಿದ್ದಂತೆ ವಿಜಯೋತ್ಸವ ಆಚರಿಸಲಾಯಿತು. ಈ ವೇಳೆ ಯುವಕನೊಬ್ಬ ತಲ್ವಾರ್ ಹಿಡಿದುಕೊಂಡು ನಗರದಲ್ಲಿ ಸಂಚರಿಸಿದ್ದ. ಆತನನ್ನು ಪೊಲೀಸರು ಬಂಧಿಸಿದ್ದಾರೆ.

ರಾಜಕುಮಾರ ಹಳ್ಳದಮನಿ(28) ಬಂಧಿತ ಆರೋಪಿ. 144 ಸಕ್ಷನ್ ಜಾರಿಯಲ್ಲಿತ್ತು. ಯಾವುದೇ ರೀತಿಯ ಆಯುಧ ಹಿಡಿದುಕೊಂಡು ತಿರುಗುವುದಾಗಲಿ, ಸಾಗಾಟ ಮಾಡುವುದಾಗಿ ಮಾಡಿದರೆ ಕಾನೂನು ಉಲ್ಲಂಘನೆಯಾಗುತ್ತೆ ಮೊದಲೇ ತಿಳಿಸಲಾಗಿತ್ತು. ಆದರೂ ಈತ ತಲ್ವಾರ್ ಹಿಡಿದುಕೊಂಡು ತಿರುಗಾಡಿದ್ದ ವಿಡಿಯೋ ವೈರಲ್ ಆಗಿತ್ತು.

ಈ ಸಂಬಂಧ ಪೊಲೀಸರು ಭಾನುವಾರ ರಾತ್ರಿ ಯುವಕನನ್ನು ಬಂಧಿಸಿದ್ದಾರೆ. ಈ ಕುರಿತು ಗಾಂಧಿಚೌಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.




Leave a Reply

Your email address will not be published. Required fields are marked *

error: Content is protected !!