ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಚಿಕ್ಕಬಳ್ಳಾಪುರ ತಾಲೂಕಿನ ನಂದಿ ಬೆಟ್ಟದಿಂದ ಯುವಕನೊಬ್ಬ ಟ್ರಕ್ಕಿಂಗ್ ಮಾಡುವ ವೇಳೆ ಜಾರಿ ಬಿದ್ದಿದ್ದಾನೆ. ಸುಮಾರು 300 ಅಡಿ ಪ್ರಪಾತಕ್ಕೆ ಬಿದ್ದಿದ್ದು, ರಕ್ಷಿಸಿ ಎಂದು ಮೊರೆ ಇಡುತ್ತಿದ್ದಾನೆ. ನಿಶಾಂತ್ ಗುಲ್ಲಾ(19) ಅನ್ನೋ ಯುವಕ ಬೆಟ್ಟದಿಂದ ಜಾರಿ ಬಿದ್ದಿದ್ದಾನೆ.
ಪೊಲೀಸರು ಹಾಗೂ ಅಗ್ನಿಶಾಮಕದಳದ ಸಿಬ್ಬಂದಿ ರಕ್ಷಣಾ ಕಾರ್ಯ ನಡೆಸಿದ್ದಾರೆ. ಯುವಕನ ಕುಟುಂಬಸ್ಥರು ಮಗನನ್ನು ರಕ್ಷಿಸಿ ಎಂದು ಗೋಳಾಡುತ್ತಿದ್ದಾರೆ. ಯುವಕ ದುರ್ಗಮ ಪ್ರದೇಶದಲ್ಲಿ ಬಿದ್ದಿರುವುದರಿಂದ ರಕ್ಷಣಾ ಕಾರ್ಯಕ್ಕೆ ತೊಂದರೆಯಾಗುತ್ತಿದೆ ಎಂದು ಹೇಳಲಾಗುತ್ತಿದೆ.