ಪ್ರಜಾಸ್ತ್ರ ಸುದ್ದಿ
ಮೈಸೂರು: ಹುಟ್ಟು ಹಬ್ಬದ ದಿನವೇ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಶ್ರೀರಂಗಪಟ್ಟಣದ ಪಶ್ವಿಮ ವಾಹಿನಿ ಹತ್ತಿರ ನಡೆದಿದೆ. ಮೈಸೂರಿನ ಎನ್.ಆರ್ ಮೊಹಲ್ಲಾದ ನಿವಾಸಿ 30 ವರ್ಷದ ಎಸ್.ಕಾರ್ತಿಕ ಆತ್ಮಹತ್ಯೆ ಮಾಡಿಕೊಂಡ ಯುವಕನಾಗಿದ್ದಾನೆ.
ತಂದೆ, ತಾಯಿ ಸಾವಿನಿಂದ ಕಾರ್ತಿಕ ಸಾಕಷ್ಟು ನೊಂದುಕೊಂಡಿದ್ದ. ಹೀಗಾಗಿ ಈ ಹಿಂದೆಯೂ ಎರಡು ಬಾರಿ ಆತ್ಮಹತ್ಯೆಗೆ ಯತ್ನಿಸಿದ್ದನಂತೆ. ಆದ್ರೆ, ಮೂರನೇ ಬಾರಿಗೆ ಕಾರ್ತಿಕ, ಚಿಕ್ಕಮ್ಮನ ಮನೆಯಲ್ಲಿದ್ದಾಗ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಆತ್ಮಹತ್ಯೆ ಮಾಡಿಕೊಂಡಿರುವ ಕಾರ್ತಿಕ ಡೆತ್ ನೋಟ್ ಬರೆದಿಟ್ಟಿದ್ದಾನೆ. ಈ ಕುರಿತು ಶ್ರೀರಂಗಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.